ಕೋಟೆಕಲ್ ಜಾತ್ರೆ : ಅಗ್ನಿ ಪ್ರವೇಶೋಲ್ಲಂಘನ
ಲೋಕದರ್ಶನವರದಿ
ಗುಳೇದಗುಡ್ಡ09: ಧಾಮರ್ಿಕ ಆಚರಣೆಗಳಿಗೆ ಪ್ರಸಿದ್ದವಾಗಿರುವ ಈ ಭಾಗದ ಕೋಟೆಕಲ್ ಗ್ರಾಮದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ರಥೋತ್ಸವದ ಅಂಗವಾಗಿ ಶನಿವಾರ ಮಂಟಾ ಬಂಧುಗಳಿಂದ ಅಗ್ನಿ ಪ್ರವೇಶೋಂಲ್ಲಘನ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
ಬೆಳಿಗ್ಗೆ ಕತರ್ೃ ಗದ್ದುಗೆಗೆ ರುದ್ರಾಭೀಷೇಕ ನಡೆಯಿತು. ಸಂಜೆ ಮಂಟಾ ಪರಿವಾರದವರಿಂದ ಅಗ್ಗಿ ಹಾಯುವ ಕಾರ್ಯಕ್ರಮಕ್ಕೆ ಪೂಜೆ ನಡೆಯಿತು. ಪಲ್ಲಕಿ ಹೊತ್ತು ಅಗ್ನಿ ಹಾಯುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ನಂತರ ನೂರಾರು ಜನರು ಅಗ್ಗಿ ಹಾಯ್ದು ಹುಚ್ಚೇಶ್ವರ ದೇವರ ಆಶಿವರ್ಾದಕ್ಕೆ ಪಾತ್ರರಾದರು.
ಈ ಸಂದಭದಲ್ಲಿ ಮರಡಿಮಠದ ಕಾಡಸಿದ್ದೇಶ್ವರ ಶ್ರೀಗಳು, ಗಂಗಾವತಿಯ ಕಲ್ಮಠದ ಡಾ.ಕೊಟ್ಟೂರು ಶ್ರೀಗಳು, ಮುರುಘಾಮಠದ ಕಾಶಿನಾಥ ಶ್ರೀಗಳು, ಹೊಳೆಹುಚ್ಚೇಶ್ವರ ಶ್ರೀಗಳು, ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಶ್ರೀಗಳು ಸಾನಿಧ್ಯವಹಿಸಿದ್ದರು.
ಭುಜಂಗರಾವ ದೇಸಾಯಿ, ಹನಮಂತ ಮಾವಿನಮರದ, ಪ್ರಭು ಮಂಟಾಗೌಡ್ರ, ಕಾಶಪ್ಪ ಮಂಟಾಗೌಡ್ರ, ತಿಪ್ಪಾಗೌಡ್ರ, ವಿಜಯಕುಮಾರ ಬೇಟಗೇರಿಗೌಡ್ರ, ಶಿವಾನಂದ ಮಂಟಾ, ಬಸವರಾಜ ಮಂಟಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 