ಕೋಟ್ಪಾ ದಾಳಿ: 31 ಪ್ರಕರಣ ದಾಖಲು
ಬಾಗಲಕೋಟೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಬಾಗಲಕೋಟೆ ನಗರ ಪೊಲೀಸ್ ಠಾಣೆ ಒಳಗೊಂಡ ತಂಡವು ಕೋಟ್ಪಾ-2003ರ ಕಾಯಿದೆ ಅಡಿಯಲ್ಲಿ ಬಾಗಲಕೋಟೆ ನಗರದಲ್ಲಿ ಮಂಗಳವಾರ ಕಾಯರ್ಾಚರಣೆ ನಡೆಸಿ 31 ಪ್ರಕರಣಗಳನ್ನು ದಾಖಲಿಸಿದೆ.
ತಂಬಾಕು ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಪಾನ್ಶಾಪ್ ಅಂಗಡಿಗಳ ಮೇಲೆ ನಡೆಸಿದ ಕಾಯರ್ಾಚರಣೆಯಲ್ಲಿ ತಂಬಾಕು ಉತ್ಪನ್ನಗಳ ಅಧಿನಿಯಮ-2003ರ ಸೆಕ್ಷನ್ 4 ಹಾಗೂ 6 ರಲ್ಲಿ ಒಟ್ಟು 31 ಪ್ರಕರಣಗಳನ್ನು ದಾಖಲಿಸಿ ಒಟ್ಟು 4600 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಿಧಿಸಿ, ನಿಯಮಬಾಹಿರವಾಗಿ ಅಳವಡಿಸಿದ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು.
ಕಾಯರ್ಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಜಿಲ್ಲಾ ತಂಬಾಕು ಸಲಹೆಗಾರರಾದ ಶಶಿಕಾಂತ ಕುಮಠಳ್ಳಿ, ಸಮಾಜ ಕಾರ್ಯಕರ್ತರಾದ ಶಿವಲಿಂಗ ಕರಗಣ್ಣಿ, ಬಾಗಲಕೋಟೆ ನಗರ ಪೋಲಿಸ್ ಠಾಣೆಯ ಪಿ.ಎಸ್.ಐ ಶಿವಶಂಕರ್ ಮುಕ್ರಿ ಹಾಗೂ ಸಿಬ್ಬಂದಿಗಳು ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಹಿರಿಯ ಆಹಾರ ಸುರಕ್ಷತಾ ಅಧಿಕಾರಿಗಳಾದ ಎಂ.ಎನ್.ವೆಂಕಟೇಶ ಮತ್ತು ರಾಷ್ಟ್ರೀಯ ಬಾಲಕಾಮರ್ಿಕ ಯೋಜನೆಯ ಯೋಜನಾ ನಿದರ್ೇಶಕರಾದ ಸುಧಾಕರ ಬಡಿಗೇರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 