ಕೊವಿಡ್-19: ದೇಶದಲ್ಲಿ ಗುಣಮುಖರಾದವರ ಪ್ರಮಾಣ ಶೇ 20.66, ಸಾವಿನ ಪ್ರಮಾಣ ಶೇ 3.1
ನವದೆಹಲಿ, ಏಎಪ್ರಿಲ್ 25, ದೇಶದಲ್ಲಿ ಕೊರೊನಾವೈರಸ್ (ಕೊವಿಡ್ -19) ಸೋಂಕಿತರ ಪೈಕಿ 5,000 ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಕೆ ಪ್ರಮಾಣ ಶೇ 20.66 ಕ್ಕೆ ಏರಿಕೆಯಾಗಿದೆ.ಈ ನಡುವೆ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಸಾವಿನ ಪ್ರಮಾಣ ಸುಮಾರು ಶೇ 3.1ರಷ್ಟಿದೆ.ದೇಶದಲ್ಲಿ ಕೊರೊನವೈರಸ್ನ ಸದ್ಯದ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಚಿವರ ತಂಡದ 13 ನೇ ಸಭೆ ಶನಿವಾರ ಇಲ್ಲಿ ನಡೆಯಿತು.ಈವರೆಗೆ 5,062 ಜನರು ಚೇತರಿಕೆ ಕಾಣುವುದರೊಂದಿಗೆ ಶೇ 20.66 ರಷ್ಟು ರೋಗಿಗಳನ್ನು ಗುಣಪಡಿಸಲಾಗಿದೆ ಶುಕ್ರವಾರದಿಂದ 1429 ಹೊಸ ಪ್ರಕರಣಗಳ ಹೆಚ್ಚಳ ವರದಿಯಾಗಿದೆ. ಅಲ್ಲದೆ, ಒಟ್ಟು 24,506 ಜನರಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದೆ ಎಂದು ಸಚಿವರ ತಂಡಕ್ಕೆ ಮಾಹಿತಿ ನೀಡಲಾಯಿತು.
ಸದ್ಯ ಸೋಂಕಿನಿಂದ ಸಾವಿನ ಪ್ರಮಾಣ ಶೇ 3.1 ರಷ್ಟಿದ್ದರೆ, ಚೇತರಿಕೆ ಪ್ರಮಾಣ ಶೇ 20 ಕ್ಕಿಂತ ಹೆಚ್ಚಿದೆ. ಇದು ಅನೇಕ ದೇಶಗಳಿಗೆ ಹೋಲಿಸಿದರೆ ಉತ್ತಮವಾಗಿದೆ. ದೇಶದಲ್ಲಿ ಕ್ಲಸ್ಟರ್ ನಿರ್ವಹಣೆ ಮತ್ತು ಕಂಟೈನ್ಮೆಂಟ್ ಕಾರ್ಯ ತಂತ್ರದೊಂದಿಗೆ ಲಾಕ್ಡೌನ್ ಜಾರಿ ಕ್ರಮವು ಸಕಾರಾತ್ಮಕ ಪರಿಣಾಮವೆಂದು ಪರಿಗಣಿಸಬಹುದು.ಸಭೆಯಲ್ಲಿ ಡಾ.ಹರ್ಷವರ್ಧನ್ ಅವರಲ್ಲದೆ, ನಾಗರಿಕ ವಿಮಾನಯಾನ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಮನ್ಸುಕ್ ಮಾಂಡವಿಯಾ ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಮತ್ತು ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಉಪಸ್ಥಿತರಿದ್ದರು. ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್, ಉನ್ನತಮಟ್ಟದ 6ನೇ ಸಚಿವರ ತಂಡದ ಅಧ್ಯಕ್ಷ ಸಿ ಕೆ ಮಿಶ್ರಾ, (ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ) ಮತ್ತು 2ನೇ ತಂಡದ ಅಧ್ಯಕ್ಷರು, ಡಾ. ಅರುಣ್ ಕೆ ಪಾಂಡ ಸಭೆಯಲ್ಲಿ ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 