ಕೋವಿಡ್ 19: ದುಬೈಯಿಂದ ಬಂದಿದ್ದ ಭಟ್ಕಳದ ಯುವಕ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ಮಂಗಳೂರು, ಏ.6,ದುಬೈಯಿಂದ ಮಾರ್ಚ್ 19ರಂದು ಮಂಗಳೂರಿಗೆ ಬಂದಾಗ ಕೋವಿಡ್ 19 ಸೋಂಕು ಇರುವುದು ದೃಢಪಟ್ಟ ಭಟ್ಕಳದ ಯುವಕ ಇದೀಗ ಸಂಪೂರ್ಣ ಗುಣಮುಖವಾಗಿದ್ದು, ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.ವೆನ್ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ 22ರ ಹರೆಯ ಯುವಕ ಇದೀಗ ಸಂಪೂರ್ಣ ಗುಣಮುಖನಾಗಿದ್ದು, ಇದೀಗ ನಡೆಸಿದ ಎರಡು ಬಾರಿ ಟೆಸ್ಟ್ನಲ್ಲಿ ಕೊರೋನ ನೆಗಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸದಾಶಿವ ತಿಳಿಸಿದ್ದಾರೆ.
ಮಾ.19ರಂದು ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಬಂದಿದ್ದ ಭಟ್ಕಳದ ಯುವಕನಲ್ಲಿ ಮಾ.22ರಂದು ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ 14 ದಿನಗಳ ನಿಗಾ ಅವಧಿ ಪೂರೈಸಿದ್ದು, ಗುಣಮುಖನಾಗಿದ್ದಾರೆ. ಆತನ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಎ.2 ಮತ್ತು 3ರಂದು ಹೀಗೆ ಮತ್ತೆ ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಆತನ ದ್ರವದ ಮಾದರಿಯ ವರದಿಯು ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 