ಕೊವಿದ್‍-19: ತಬ್ಲಿಘಿ ಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ನ 11 ಮಂದಿಗೆ ಸೋಂಕು ದೃಢ

 ಕೊವಿದ್‍-19: ತಬ್ಲಿಘಿ ಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ನ 11 ಮಂದಿಗೆ ಸೋಂಕು ದೃಢ

ಬೀದರ್, ಏಪ್ರಿಲ್ 2 , ಇತ್ತೀಚೆಗೆ ನವದೆಹಲಿಯ ನಜಾಮುದ್ದೀನ್ ದರ್ಗಾದಲ್ಲಿ ನಡೆದ ಮಾರ್ಕಾಜ್‌ಗೆ ಹಾಜರಾಗಿದ್ದ ಜಿಲ್ಲೆಯ 27 ತಂಡದ ಭಾಗವಾಗಿದ್ದ ಕನಿಷ್ಠ 11 ಜನರಲ್ಲಿ ಕೊವಿದ್-19 ಸೋಂಕು ದೃಢಪಟ್ಟಿದೆ ಎಂದು ಬೀದರ್ ಜಿಲ್ಲಾಧಿಕಾರಿ ಎಚ್ ಸಿ ಮಹದೇವ್ ಗುರುವಾರ ತಿಳಿಸಿದ್ದಾರೆ.ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಹಾದೇವ್ ಅವರು, ಕಲಬುರಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ 27 ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ಇದು ದೃಢಪಟ್ಟಿದೆ. ಕೊವಿದ್‍ -19 ಸೋಂಕಿತ ಎಲ್ಲ ರೋಗಿಗಳನ್ನು ಸಂಪರ್ಕತಡೆ(ಕ್ವಾರಂಟೈನ್‍)ನಲ್ಲಿ  ಇರಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ನಲ್ಲಿರುವ ಪ್ರತ್ಯೇಕ ವಾರ್ಡ್‌ನಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ದೆಹಲಿಗೆ ಹೋಗಿ ಬಂದಿದ್ದವರ ಜೊತೆ ದ್ವಿತೀಯ ಸಂಪರ್ಕದ 98 ಜನರನ್ನು ಸಹ ಗುರುತಿಸಲಾಗಿದೆ. ಇವರೆಲ್ಲರನ್ನು ಗೃಹ ಸಂಪರ್ಕತಡೆಯಲ್ಲಿ ಇರುವಂತೆ ಕಟ್ಟು ನಿಟ್ಟಾಗಿ ಸೂಚಿಸಲಾಗಿದೆ ಎಂದು ಮಹದೇವ್‍ ಹೇಳಿದ್ದಾರೆ.