ಕೊವಿಡ್-19: ರಂಜಾನ್ ಮುಗಿಯುವವರೆಗೆ ಲಾಕ್ಡೌನ್ ಮುಂದುವರಿಕೆಗೆ ಉಡುಪಿ ಕ್ವಾಜಿ ಮನವಿ
ಮಂಗಳೂರು, ಮೇ 3,ರಂಜಾನ್ ಮಾಸ ಮುಗಿಯುವವರೆಗೆ ಲಾಕ್ಡೌನ್ ಅವಧಿ ವಿಸ್ತರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಉಡುಪಿ ಕ್ವಾಜಿ ಅಲ್ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಮನವಿ ಮಾಡಿದ್ದಾರೆ.ಈ ಭಾಗದಲ್ಲಿ ಮುಸ್ಲೀಮರು ಆಡಳಿತಗಳೊಂದಿಗೆ ಸಹಕರಿಸುತ್ತಿದ್ದು,ವಕ್ಫ್ ಮಂಡಳಿಯ ಸೂಚನೆಯಂತೆ ರಂಜಾನ್ ಮಾಸದಲ್ಲಿ ಇಫ್ತಾರ್ ಕೂಟಗಳು, ಪ್ರಾರ್ಥನೆಗಳು, ದರ್ಗಾ,ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳಿಂದ ದೂರವಿದ್ದಾರೆ ಎಂದು ಕ್ವಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈದ್ ಸಂದರ್ಭದಲ್ಲಿ ಲಾಕ್ಡೌನ್ ಸಡಿಲಿಕೆಯಿಂದ ವಾಹನ ಸಂಚಾರ ಮತ್ತು ಜನರ ಓಡಾಟ ಹೆಚ್ಚಾಗಿ ಕೊವಿಡ್-19 ಮತ್ತೊಮ್ಮೆ ಉಲ್ಬಣಗೊಳ್ಳುವ ಅಪಾಯವಿದೆ. ಮಾರಣಾಂತಿಕ ಸೋಂಕು ಹರಡುವಿಕೆ ತಡೆಯಲು ಕನಿಷ್ಠ ರಂಜಾನ್ ಮಾಸ ಮುಗಿಯುವವರೆಗೆ ಲಾಕ್ಡೌನ್ ಮುಂದುವರಿಸಲು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ನಿಯಮಗಳನ್ನು ಸಡಿಲಿಸುವುದರಿಂದ ಹಬ್ಬದ ಸಂದರ್ಭದಲ್ಲಿ ಜನರು ಬಟ್ಟೆ, ಮತ್ತಿತರ ವಸ್ತುಗಳನ್ನು ಖರೀದಿಸಲು ಮುಗಿಬೀಳಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ದೊಡ್ಡ ಸಮಸ್ಯೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 