ಕೋವಿಡ್ 19 ಹಿನ್ನೆಲೆ: ಸಂಕಷ್ಟದಲ್ಲಿರುವ ಪೋಷಕರಿಗೆ ವಿದ್ಯಾರ್ಥಿ ವೇತನ - ವಿಬ್ ಗಯಾರ್ ಶಿಕ್ಷಣ ಸಂಸ್ಥೆ ತೀರ್ಮಾನ
ಬೆಂಗಳೂರು, ಜೂ 2,ಕೋವಿಡ್ -19 ಸಂಕಷ್ಟ ಸಂದರ್ಭದಲ್ಲಿ ಪೋಷಕರಿಗೆ ಹಣಕಾಸಿನ ನೆರವು ನೀಡಲು ವಿಬ್ ಗಯಾರ್ ಶಿಕ್ಷಣ ಸಂಸ್ಥೆ ಮುಂದಾಗಿದೆ. ಇದಕ್ಕಾಗಿ “ ವಿಬ್ ಗಯಾರ್ ಎಜುಬ್ರಿಡ್ಜ್ ಸ್ಕಾಲರ್ ಶಿಪ್" ಕಾರ್ಯಕ್ರಮ ಆರಂಭಿಸಿದೆ.ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಪೋಷಕರಿಗೆ ನೆರವು ನೀಡಲು ವಿನೂತನ ರೀತಿಯಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮ ಪ್ರಾರಂಭಿಸಿದ್ದು, ದೇಶಾದ್ಯಂತ ಇರುವ 38 ಶಾಲೆಗಳಲ್ಲಿ ಈ ಸೌಲಭ್ಯ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.
ಲಾಕ್ ಡೌನ್ ಸಂಕಷ್ಟಕ್ಕೀಡಾಗಿ ಆರ್ಥಿಕ ತೊಂದರೆ ಎದುರುಸುತ್ತಿರುವ ಪೋಷಕರಿಗೆ ನೆರವು ನೀಡುವುದು ಸಂಸ್ಥೆಯ ಉದ್ದೇಶವಾಗಿದೆ. ವಿಬ್ ಗಯಾರ್ ನ ತಜ್ಞರ ತಂಡ ವಿದ್ಯಾರ್ಥಿವೇತನದ ರೂಪುರೇಷೆಯನ್ನು ವಿನ್ಯಾಸಗೊಳಿಸಿದೆ. ಕೇವಲ ಏಳು ದಿನಗಳಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನ ಜಾರಿಗೊಳಿಸಿ ಪೋಷಕರಿಗೆ ಬೆಂಬಲ ಮತ್ತು ಸಹಾಯ ನೀಡಲಿದ್ದು, ಇದಕ್ಕಾಗಿ ಪೋಷಕರ ಆರ್ಥಿಕ ಪರಿಸ್ಥಿತಿಯ ಮೌಲ್ಯಮಾಪನ ಮಾಡಿದ ನಂತರ ವಿದ್ಯಾರ್ಥಿವೇತ ವಿತರಿಸಲಾಗುವುದು ಎಂದು ಹೇಳಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 