ಕೊವಿದ್ -19 ದಿಢೀರ್ ಉಲ್ಬಣ ಹಿನ್ನೆಲೆ: ಶ್ರೀಲಂಕಾದಲ್ಲಿ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ
ಕೊಲಂಬೊ, ಮಾರ್ಚ್ 20,ದ್ವೀಪ ದೇಶದಲ್ಲಿ ಕೊವಿದ್-19 ಹರಡುವುದನ್ನು ತಡೆಯಲು ಶ್ರೀಲಂಕಾ ಸರ್ಕಾರ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಿಸಿದ್ದು, ಇದು ಶುಕ್ರವಾರ ಸಂಜೆ 6:00 ರಿಂದ ಜಾರಿಗೆ ಬರಲಿದ್ದು, ಸ್ಥಳೀಯ ಕಾಲಮಾನ ಸೋಮವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಳ್ಳುತ್ತದೆ.
ದೇಶದ ಎಲ್ಲ ಜನರು ಕರ್ಫ್ಯೂಗೆ ಬದ್ಧರಾಗಿ ಮನೆಯೊಳಗೆ ಇರಬೇಕೆಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ಸೂಚಿಸಿದೆ.ಶುಕ್ರವಾರದಿಂದ ಏಳುದಿನ ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುವಂತೆ ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಗುರುವಾರ ಘೋಷಿಸಿದ್ದರು. ಮಾರ್ಚ್ 27 ರವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀಲಂಕಾದಲ್ಲಿ ಇದುವರೆಗೆ ಕೊವಿದ್ -19ನ 59 ಪ್ರಕರಣಗಳು ದೃಢಪಟ್ಟಿದ್ದು, ಇತರ 230 ಕ್ಕೂ ಹೆಚ್ಚು ಶಂಕಿತ ಪ್ರಕರಣಗಳ ಮೇಲೆ ದೇಶದ ವಿವಿಧ ಆಸ್ಪತ್ರೆಗಳಲ್ಲಿ ನಿಗಾವಹಿಸಲಾಗಿದೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 