ರಾಮ ಮಂದಿರದಲ್ಲಿ ವಿಜ್ರಂಭಣೆಯಿಂದ ಆಚರಿಸಿದ ಕೃಷ್ಣಾಷ್ಠಮಿ
Krishna Ashtami celebrated with grandeur at Ram Mandir
ಅಥಣಿ, 19 ; ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಅಥಣಿ ಶ್ರೀರಾಮ ಮಂದಿರದಲ್ಲಿ ಬಾಲ ಕೃಷ್ಣನ ಮೂರ್ತಿಯನ್ನು ತೊಟ್ಟಿಲಲ್ಲಿಟ್ಟು ಸುಮಂಗಲೆಯರು ಹಾಡು ಹಾಡಿ ಅಲಂಕೃತ ತೊಟ್ಟಿಲು ತೂಗಿದರು. ವಿವಿಧ ಹೂ ಮತ್ತು ಹೂ ಮಾಲೆಗಳಿಂದ, ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಿದ ಕೃಷ್ಣ ಮತ್ತು ರಾಧೆಯ ಮೂರ್ತಿಗಳನ್ನು ಅಲಂಕೃತ ವೇದಿಕೆ ಮೇಲಿಟ್ಟು ಭಕ್ತಿಯಿಂದ ಪೂಜಿಸಿದರು.
ವೇದಿಕೆ ಮೇಲೆ ಕೃಷ್ಣನಿಗೆ ಇಷ್ಟವಾದ ಬೆಣ್ಣೆ, ಹಣ್ಣು, ಹಾಲು, ಮೊಸರು, ಶುಂಠಿ, ಸಕ್ಕರೆ ಇಟ್ಟು ನೈವೆದ್ಯ ತೋರಿಸಿದರು. ಕೃಷ್ಣಾಷ್ಠಮಿ ನಿಮಿತ್ಯ ಭಜನೆ ಪದಗಳನ್ನು ಹಾಡಿದರು. ವೇದಿಕೆ ಮೇಲೆ ವಸುದೇವ, ದೇವಕಿ, ಬಲರಾಮರ ಚಿಕ್ಕ ಚಿಕ್ಕ ಮೂರ್ತಿಗಳನ್ನಿಟ್ಟು ಪುಟ್ಟ ಗೋಕುಲವನ್ನೇ ನಿರ್ಮಾಣ ಮಾಡಿದ್ದರು.
ಮರುದಿನ ಪಾರಣಿಯಂದು ಸಂಜೆ ಹಾಡು, ಭಜನೆ ಮಾಡಿ ಕೋಲಾಟ ಆಡಿ ಕುಣಿದು ಕುಪ್ಪಳಿಸಿ ಹಾಲು, ಮೊಸರು, ಬೆಣ್ಣೆಯಿಂದ ತುಂಬಿದ್ದ ಗಡಿಗೆಯನ್ನು ಒಡೆಯುವ ಮೂಲಕ ಗೋಪಾಳ ಕಾವಲಿ ಆಚರಿಸಿ ವಿಜ್ರಂಭಿಸಿದರು. ಕೃಷ್ಣಾಷ್ಠಮಿ ಕಾರ್ಯಕ್ರಮಗಳೆಲ್ಲವು ಲಕ್ಷ್ಮಣ ರಾಮದಾಸಿ, ಕ್ಷಮಾ ರಾಮದಾಸಿ ನೇತೃತ್ವದಲ್ಲಿ ನಡೆದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 