ಮಣ್ಣಲ್ಲಿ ಲೀನಳಾದ ಕೃತಿಕಾ: ಮುಗಿಲು ಮುಟ್ಟಿದ ಆಕ್ರಂದನ
Kritika's funeral
ಕಾಗವಾಡ 02: ಓದಿದ್ದು ಕೆಎಎಸ್, ಈಗ ಕೇವಲ 36 ವರ್ಷ, ಅಪ್ಪನ ಮುದ್ದಿನ ಮಗಳು ಅನಿಸಿಕೊಂಡ ಅಪ್ರತಿಮ ಛಲಗಾರ್ತಿ, ತಂದೆಯ ರಾಜಕೀಯ ಜೀವನಕ್ಕೆ ಚಾಣಾಕ್ಷಳಂತೆ ಮುಂದೆ ನಿಂತು, ಧೈರ್ಯ ತುಂಬಿದ ಮಗಳು, ಅರ್ಧಕ್ಕೆ ಇಹಲೋಕ ತ್ಯಜಿಸಿದ್ದು, ಯಾವ ತಂದೆಗೂ ಸಹಿಸಲು ಅಸಾಧ್ಯ.
ಹೌದು.. ಬೆಳಗಾವಿ ಜಿಲ್ಲೆ ಕಾಗವಾಡ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಜೇಷ್ಠ ಪುತ್ರಿ ಕೃತಿಕಾ ನಿನ್ನೆ ತಮ್ಮ ಜೀವನಕ್ಕೆ ಅಂತಿಮ ವಿದಾಯ ಹೇಳಿದ್ದಾರೆ. ಕಳೆದ ಒಂದು ವರ್ಷಗಳಿಂದ ಕ್ಯಾನ್ಸರ್ ಅನ್ನೋ ಮಹಾಮಾರಿಗೆ ತುತ್ತಾದ ಕೃತಿಕಾ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯಾನ ಕೊನೆಯುಸಿರೆಳೆದರು. ತಮ್ಮ ಬದುಕಿನುದ್ದಕ್ಕೂ ಸ್ಫೂರ್ತಿಯಾಗಿದ್ದ ಮಗಳ ಸಾವಿನ ಸುದ್ದಿ ತಿಳಿದ ಕುಟುಂಬಕ್ಕೆ ಬರಸಿಡಿಲೆ ಅಪ್ಪಳಿಸಿದಂತಾಗಿದೆ.
ರವಿವಾರ ದಿ. 2 ರಂದು ಬೆಳಿಗ್ಗೆ 6 ಗಂಟೆಗೆ ಮೃತ ದೇಹ ಉಗಾರ ಖುರ್ದ ಗ್ರಾಮಕ್ಕೆ ತರಲಾಯಿತು. ಪಂಚಮಸಾಲಿ ವಿಧಿ ವಿಧಾನಗಳಂತೆ 11.30 ರ ಸುಮಾರಿಗೆ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಯಿತು. ಅಪಾರ ಬಂಧು ಬಳಗ ಅಗಲಿದ ಮೃತ ಕೃತಿಕಾ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಜನ ಹರಿದು ಬಂದಿತು. ಅಂತ್ಯಕ್ರಿಯೆಗೆ ಮಠಾಧೀಶರು, ರಾಜಕೀಯ ನಾಯಕರು ಸೇರಿದಂತೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಜನ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.
ಇನ್ನು ಏನು ಅರಿಯದ ಪುಟಾಣಿ ಮಗು ಅಮ್ಮನ ಮೃತ ದೇಹದ ಮುಂದೆ ಕಣ್ಣೀರು ಹಾಕಿದ್ದು ಎಲ್ಲರ ಕಣ್ಣಲ್ಲೂ ನೀರು ಬರಿಸಿತು. ಒಟ್ಟಾರೆಯಾಗಿ ಬಾಳಿ ಬದುಕಬೇಕಿದ್ದ ಕೃತಿಕಾ ಚಿಕ್ಕ ವಯಸ್ಸಿಗೆ ಇಹಲೋಕ ತ್ಯಜಿಸಿದ್ದು, ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು ಮಾತ್ರ ಸುಳ್ಳಲ್ಲ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 