ಕುಡತಿನಿ: ಮುಂಗಡ ಆಯ-ವ್ಯಯ ವರದಿ ಸಿದ್ಧತಾ ಸಭೆ
Kudathini: Advance Budget Report Preparation Meeting
ಬಳ್ಳಾರಿ 17: ಕುಡತಿನಿ ಪಟ್ಟಣ ಪಂಚಾಯಿತಿಯ 2026-27ನೇ ಸಾಲಿನ ಮುಂಗಡ ಆಯ-ವ್ಯಯ ವರದಿ ಸಿದ್ಧತೆ ಅಂಗವಾಗಿ ಶುಕ್ರವಾರ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸ್ವೀಕಾರಗೊಂಡ ಸಲಹೆ-ಸೂಚನೆ:
ಕುಡತಿನಿ ಪಟ್ಟಣದ 02 ನೇ ವಾರ್ಡ್ನಲ್ಲಿ ಚರ್ಚ್ ಹತ್ತಿರ ಉಳಿಕೆ ರಸ್ತೆ ಕಾಮಗಾರಿಯನ್ನು ಅಳವಡಿಸಿ ಪೂರ್ಣಗೊಳಿಸುವುದು. 02 ನೇ ವಾರ್ಡಿನಲ್ಲಿ ಈಗಾಗಲೇ ಮುಕ್ತಾಯವಾದ ರಸ್ತೆ ಕಾಮಗಾರಿ ಅಕ್ಕ ಪಕ್ಕ ಗ್ರಾವೆಲ್ ಹಾಕುವುದು. ಕೆರೆ ಹತ್ತಿರ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡುವುದು. ಕನ್ನಡ ಉಳಿವಿಗಾಗಿ ಕರ್ನಾಟಕ ರಕ್ಷಣಾ ವೇದಿಕೆಗೆ ವಸತಿ ಕಲ್ಪಿಸಲು ಸೂಚಿಸಲಾಯಿತು.
09 ನೇ ವಾರ್ಡಿನಲ್ಲಿ ದುರಸ್ಥಿಯಲ್ಲಿದ್ದ ರಸ್ತೆಯನ್ನು ಅಗೆದು ಪೇವರ್ಸ ಹಾಕಲು ಕ್ರಮವಹಿಸುವುದು. ರಾಜ ಕಾಲುವೆಯಲ್ಲಿನ ಶೀಲ್ಟ್ ತೆಗೆಯಲು ಕ್ರಮವಹಿಸುವುದು. 18ನೇ ವಾರ್ಡಿನಲ್ಲಿ ಚಲುವಾದಿ ಕೇರಿಯಲ್ಲಿ ಜನಾಂಗದವರು ಕಾಯ್ದಿರಿಸಿದ 100*100 ಸ್ಥಳದಲ್ಲಿ ಗ್ರಂಥಾಲಯ ಅಥವಾ ಭವನ ನಿರ್ಮಾಣ ಮಾಡಲು ಸೂಚಿಸಿದರು.
ಬಳಿಕ ಸಭೆಯಲ್ಲಿ ಪಟ್ಟಣ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ಹಿರಿಯ ನಾಗರಿಕರು, ಪಟ್ಟಣದ ಮುಖಂಡರು ಭಾಗವಹಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 