ಗೋರಖ್ಪುರ ಎಡಿಜಿಪಿಗೆ ಸನ್ಮಾನ
Kudos to Gorakhpur ADGP
ಹುಬ್ಬಳ್ಳಿ 31: ನಗರದ ಜೈನ್ ಮರುಧರ್ ಸಂಘದಲ್ಲಿ ಚಾತುರ್ಮಾಸ ಕೈಗೊಂಡಿರುವ ಸಾಧ್ವಿ ಮೋಕ್ಷ ಮಾಲಾಶ್ರೀ ಅವರ ಪೂರ್ವಾಶ್ರಮದ ಸಹೋದರರು ಹಾಗೂ ಉತ್ತರ ಪ್ರದೇಶ ಕೆಡರ್ನ ಗೋರಖ್ಪುರ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ ಮಾಂಗೀಲಾಲಜಿ ಜೈನ್ (ಆಹೋರ್) ದಂಪತಿಗಳು ಹುಬ್ಬಳ್ಳಿಗೆ ಆಗಮಿಸಿದ್ದರು.
ಸಾಧ್ವೀಜಿಯವರನ್ನು ಭೇಟಿಯಾಗಿ ದರ್ಶನ ವಂದನೆ ನೆರವೇರಿಸಿ ಪ್ರವಚನ ಆಲಿಸಿದರಲ್ಲದೇ ಮರುಧರ್ ಸಂಘದಿಂದ ನಡೆಯುತ್ತಿರುವ ಧರ್ಮಕಾರ್ಯ ಮತ್ತು ಸಮಾಜಸೇವಾ ಚಟುವಟಿಕೆಗಳನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಇಂದರ್ಮಲ್ ಜೈನ್, ಕಾರ್ಯದರ್ಶಿ ದಿನೇಶ ಸಂಘವಿ, ಟ್ರಸ್ಟಿಗಳಾದ ಚಂಪಲಾಲ್ ಜೈನ್, ವೀರಚಂದ್ ಜೈನ್, ಪಾರಸಮಲ್ ಭನ್ಸಾಲಿ, ವೀನೀತ್ ಜೈನ್, ಸುರೇಶ್ ಜೈನ್ ಮತ್ತು ಸಮಾಜಸೇವಕರು ಹಾಗೂ ಪ್ರಧಾನಮಂತ್ರಿ 15 ಸೂತ್ರಿಯ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯಕ್ರಮ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ಮುಂತಾದವರು ಇದ್ದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 