ಗೋರಖ್ಪುರ ಎಡಿಜಿಪಿಗೆ ಸನ್ಮಾನ
Kudos to Gorakhpur ADGP
ಹುಬ್ಬಳ್ಳಿ 31: ನಗರದ ಜೈನ್ ಮರುಧರ್ ಸಂಘದಲ್ಲಿ ಚಾತುರ್ಮಾಸ ಕೈಗೊಂಡಿರುವ ಸಾಧ್ವಿ ಮೋಕ್ಷ ಮಾಲಾಶ್ರೀ ಅವರ ಪೂರ್ವಾಶ್ರಮದ ಸಹೋದರರು ಹಾಗೂ ಉತ್ತರ ಪ್ರದೇಶ ಕೆಡರ್ನ ಗೋರಖ್ಪುರ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ ಮಾಂಗೀಲಾಲಜಿ ಜೈನ್ (ಆಹೋರ್) ದಂಪತಿಗಳು ಹುಬ್ಬಳ್ಳಿಗೆ ಆಗಮಿಸಿದ್ದರು.
ಸಾಧ್ವೀಜಿಯವರನ್ನು ಭೇಟಿಯಾಗಿ ದರ್ಶನ ವಂದನೆ ನೆರವೇರಿಸಿ ಪ್ರವಚನ ಆಲಿಸಿದರಲ್ಲದೇ ಮರುಧರ್ ಸಂಘದಿಂದ ನಡೆಯುತ್ತಿರುವ ಧರ್ಮಕಾರ್ಯ ಮತ್ತು ಸಮಾಜಸೇವಾ ಚಟುವಟಿಕೆಗಳನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಇಂದರ್ಮಲ್ ಜೈನ್, ಕಾರ್ಯದರ್ಶಿ ದಿನೇಶ ಸಂಘವಿ, ಟ್ರಸ್ಟಿಗಳಾದ ಚಂಪಲಾಲ್ ಜೈನ್, ವೀರಚಂದ್ ಜೈನ್, ಪಾರಸಮಲ್ ಭನ್ಸಾಲಿ, ವೀನೀತ್ ಜೈನ್, ಸುರೇಶ್ ಜೈನ್ ಮತ್ತು ಸಮಾಜಸೇವಕರು ಹಾಗೂ ಪ್ರಧಾನಮಂತ್ರಿ 15 ಸೂತ್ರಿಯ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯಕ್ರಮ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ಮುಂತಾದವರು ಇದ್ದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 