ಗುರುದ್ವಾರದ ಮೇಲಿನ ದಾಳಿಗೆ ಕುಮ್ಮಕ್ಕು, ಇಮ್ರಾನ್ ಚಿಸ್ತಿ ಬಂಧನ
ಇಸ್ಲಾಮಾಬಾದ್, ಜ 6 ಸಿಖ್ಖರ ಪವಿತ್ರ ಯಾತ್ರಾಸ್ಥಳ, ಪಾಕಿಸ್ತಾನದಲ್ಲಿರುವ ನನ್ ಕಾನಾ ಸಾಹಿಬ್ ಗುರುದ್ವಾರದ ಮೇಲಿನ ದಾಳಿಗೆ ಕುಮ್ಮಕ್ಕು, ಪ್ರಚೋದನೆ ನೀಡಿದ ಆರೋಪದಡಿ ಇಮ್ರಾನ್ ಚಿಸ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ .
ನನ್ ಕಾನಾ ಸಾಹಿಬ್ ಗುರುದ್ವಾರದ ಮೇಲೆ ದಾಳಿ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದ ಪಾಕಿಸ್ತಾನದ ವಿರುದ್ಧ ಭಾರೀ ಪ್ರತಿಭಟನೆ, ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಚಿಸ್ತಿಯನ್ನು ಬಂಧಿಸಲಾಗಿದೆ ಎಂದೂ ವರದಿ ಹೇಳಿದೆ.
ಘಟನೆಗೆ ಸಂಬಂಧಿಸಿದಂತೆ ಚಿಸ್ತಿ ಮನೆಯಿಂದಲೇ ಕ್ಷಮಾಪಣೆಯ ವೀಡಿಯೋವನ್ನು ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ.
ಸ್ಥಳೀಯ ನಿವಾಸಿಗಳ ಜತೆಗೂಡಿ ಚಿಸ್ತಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿ ನನ್ ಕಾನಾ ಗುರುದ್ವಾರ ಸಾಹಿಬ್ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿರುವ ಘಟನೆ ನಡೆದಿತ್ತು.
ಚಿಸ್ತಿ ಈಶಾನಾ ಸಹೋದರನಾಗಿದ್ದು, ಈತ ಸಿಖ್ಖ ಯುವತಿ ಜಗ್ಜೀತ್ ಕೌರ್ ಅಪಹರಣದ ಆರೋಪಿಯಾಗಿದ್ದಾನೆ. ನನ್ ಕಾನಾ ಗುರುದ್ವಾರದ ಮೇಲೆ ದಾಳಿ ನಡೆಸಿದ ಗುಂಪು ಸಿಖ್ ವಿರೋಧಿ ಘೋಷಣೆ ಕೂಗಿರುವುದಾಗಿಯೂ ವರದಿಯಾಗಿದೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 