ನೂತನ ಸಿಪಿಐ ರಮೇಶ್ ಹನಾಪುರರಿಗೆ ಕುರುಬ ಸಮುದಾಯದ ಅಭಿನಂದನೆ
Kuruba community congratulates new CPI leader Ramesh Hanapura
ಲೋಕದರ್ಶನ ವರದಿ
ಮುಂಡಗೋಡ 21: ಇಲ್ಲಿನ ಪೊಲೀಸ್ ಠಾಣೆಗೆ ನೂತನ ಸಿಪಿಐ ಆಗಿ ಆಗಮಿಸಿರುವ ರಮೇಶ್ ಹನಾಪುರ ಅವರಿಗೆ ಕುರುಬ ಸಮುದಾಯದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕುರುಬ ಸಮುದಾಯದ ಮುಖಂಡರು ಸಿಪಿಐ ರಮೇಶ್ ಹನಾಪುರ ಹಾಗೂ ಪಿಎಸ್ಐ ಮಂಜುನಾಥ್ ಗೌಡರ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಅವರ ಸೇವಾ ಅವಧಿಯಲ್ಲಿ ತಾಲೂಕಿನ ಜನತೆಗೆ ಉತ್ತಮ ಪೊಲೀಸ್ ಸೇವೆ ದೊರಕಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುರುಬ ಸಮುದಾಯದ ಅಧ್ಯಕ್ಷ ಶಿವಾನಂದ ಕುರುಬರ, ರಾಜು ಗುಬ್ಬಕನವರ, ಎಸ್.ಎಸ್. ಪಾಟೀಲ, ಮಂಜುನಾಥ ಕೋಣಕೇರಿ, ಯಲ್ಲಪ್ಪ ಕುರುಬರ, ಬಸವರಾಜ ತನಕೇದಾರ, ಮಂಜು, ರವಿ ಮಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 