ಕುರುಗೋಡು ಉತ್ಸವ: ಶಿವಬಸವ ಆರತಿಯ ಮೂಲಕ ದೈವಿಕ ದರ್ಶನ
Kurugod Festival: Divine darshan through Shiva Basava Aarti
ಬಳ್ಳಾರಿ 16: ಕುರುಗೋಡು ಉತ್ಸವದ ಅಂಗವಾಗಿ ಆಯೋಜಿಸಿದ್ದ ಶಿವಬಸವ ಆರತಿ ಕಾರ್ಯಕ್ರಮವು ದೈವಿಕ ದರ್ಶನಕ್ಕೆ ಸಾಕ್ಷಿಯಾಯಿತು. ಐತಿಹಾಸಿಕ ಪಟ್ಟಣ ಕುರುಗೋಡಿನ ಆರಾಧ್ಯದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಸನ್ನಿಧಿ ಮುಂಭಾಗದ ದೊಡ್ಡಬಸವೇಶ್ವರ ವೇದಿಕೆಯಲ್ಲಿ ಉತ್ಸವದ ಮೊದಲ ದಿನವಾದ ಭಾನುವಾರ ವಾರಣಾಸಿಯ ಅರ್ಚಕರು ಗಂಗಾರತಿಯ ಮಾದರಿಯಲ್ಲಿ ಶಿವಬಸವ ಆರತಿ ನಡೆಸಿಕೊಟ್ಟರು.
ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ಆರತಿ ಬೆಳಗಿದರು. ಮಂತ್ರಗಳ ಪಠಣ ಮತ್ತು ಶಂಖನಾದವು ಸಾರ್ವಜನಿಕರಲ್ಲಿ ಭಕ್ತಿಭಾವ ಮೂಡಿಸಿತು. ಆರತಿ ಕಾರ್ಯಕ್ರಮವು ದಾರ್ಶನಿಕ ಪಾವಿತ್ರ್ಯತೆಯನ್ನು ಮರುಕಳಿಸುವ ಕ್ಷಣಕ್ಕೆ ನಾಂದಿಯಾಯಿತು. ಇದೇ ವೇಳೆ ಮಹಾಶಿವರಾತ್ರಿಯಂದು ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಗಣ ಹಾಗೂ ಅಪಾರ ಜನಸ್ತೋಮ ಶಿವಬಸವ ಆರತಿ ಕಂಡು ಪುನೀತರಾದರು. ಶಿವಬಸವ ಆರತಿ ಕಾರ್ಯಕ್ರಮಕ್ಕೆ ಭರತನಾಟ್ಯ ಕಲಾವಿದರ ಹೆಜ್ಜೆಯ ನಾದವು ಜೊತೆಯಾಗಿದ್ದು, ನೋಡುಗರಿಗೆ ರೋಮಾಂಚನ ಮೂಡಿಸಿತು. ಇದಕ್ಕೂ ಮುನ್ನ ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಉತ್ಸವದ ಮೂರ್ತಿ ಪರಮೇಶ್ವರನಿಗೆ ಪೂಜಾ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿದರು. ಬಳಿಕ ಶ್ರೀ ದೊಡ್ಡ ಬಸವೇಶ್ವರ ದೇವಸ್ಥಾನದ ಆರತಿ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಂತರ ಸಾಧಕರಿಗೆ ಹಾಗೂ ನೌಕರರಿಗೆ ಸನ್ಮಾನ ಕಾರ್ಯಕ್ರಮ ಜರುಗಿದವು.
ಈ ವೇಳೆ ಕುರುಗೋಡು ಪುರಸಭೆಯ ಅಧ್ಯಕ್ಷ ಟಿ.ಶೇಖಣ್ಣ, ಕುರುಗೋಡು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಸವನಗೌಡ, ತಹಶೀಲ್ದಾರ ನರಸಪ್ಪ, ತಾಪಂ ಇಓ ನಿರ್ಮಲಾ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 