ಕುರುಗೋಡು: ಕುಡಿಯುವ ನೀರಿನ ಸಮಸ್ಯೆ
ಲೋಕದರ್ಶನ ವರದಿ
ಕುರುಗೋಡು 18: ಪಟ್ಟಣ ಸಮೀಪದ ಕುಡಿತಿನಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಾಂಡವಾಡುತ್ತಿದ್ದ ಹಿನ್ನಲೆಯಲ್ಲಿ ಇದಕ್ಕೆ ಪರಿಹಾರ ಕಲ್ಪಿಸಲು ಸಂಸದ ವೈ.ದೇಂದ್ರಪ್ಪ ಇತ್ತಿಚ್ಚಿಗೆ ತಿಮ್ಮಲಾಪುರ ಬಳಿಯ ತುಂಗಭದ್ರಾ ಮೇಲ್ಮಟ್ಟದ ಕಾಲುವೆಯಿಂದ ನೀರು ಪೂರೈಸುವ ಕುರಿತು ತಿಮ್ಮಲಾಪುರದ ಪಂಪ್ಹೌಸ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ತಹಸಿಲ್ದಾರ್ ತಂಡ ಮತ್ತೆ ಬೇಟಿ ನೀಡಿ ನೀರು ಪೂರೈಕೆಗೆ ಪರಿಶೀಲನೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ತಹಸಿಲ್ದಾರ್ ನಾಗರಾಜ ಮಾತನಾಡಿ, ರೈತರ ಉಪ ಕಾಲುವೆಗಳಿಂದ ಜಾಕ್ ವೆಲ್ ಮೂಲಕ ಕುಡುತಿನಿ ಕೆರೆಗೆ ನೀರು ಪೂರೈಸಲಾಗುತ್ತಿರುವುದರಿಂದ ಸಕಾಲಕ್ಕೆ ಕೆರೆ ತುಂಬಲು ಸಾಧ್ಯವಿಲ್ಲ ಎಂಬ ಜನರ ಆರೋಪದ ಮೇರೆಗೆ ಸಂಸದರು ಮತ್ತು ಶಾಸಕರು ಈಗಾಗಲೇ ಬೇಟಿ ನೀಡಿ ನೀರು ತುಂಬಿಸಲು ಹಲವು ಕ್ರಮ ಕೈಗೊಂಡಿದ್ದಾರೆ. ಅದರಂತೆ ನಾವು ಕೂಡ ಜನಪ್ರತಿನಿಧಿಗಳ ಇನ್ನಷ್ಟು ಗಮನಕ್ಕೆ ತಂದು ಎಚ್.ಎಲ್.ಸಿ ಕಾಲುವೆಯ ಮೂಲಕ ನೀರು ಹರಿಸಿ ಜನರ ಸಮಸ್ಯೆ ಬಗೆಹರಿಸುವ ಕಾರ್ಯ ನಡೆಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪಪಂ. ಸದಸ್ಯರಾದ ವೆಂಕರಮಣಬಾಬು, ನಾಗರಾಜ, ದೊಡ್ಡಬಸಪ್ಪ, ಕನಗಿರಿ ಪಂಪಾಪತಿ ಸೇರಿದಂತೆ ಮತ್ತಿತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 