ಕುರುಗೋಡು: ಕುಡಿಯುವ ನೀರಿನ ಸಮಸ್ಯೆ
ಲೋಕದರ್ಶನ ವರದಿ
ಕುರುಗೋಡು 18: ಪಟ್ಟಣ ಸಮೀಪದ ಕುಡಿತಿನಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಾಂಡವಾಡುತ್ತಿದ್ದ ಹಿನ್ನಲೆಯಲ್ಲಿ ಇದಕ್ಕೆ ಪರಿಹಾರ ಕಲ್ಪಿಸಲು ಸಂಸದ ವೈ.ದೇಂದ್ರಪ್ಪ ಇತ್ತಿಚ್ಚಿಗೆ ತಿಮ್ಮಲಾಪುರ ಬಳಿಯ ತುಂಗಭದ್ರಾ ಮೇಲ್ಮಟ್ಟದ ಕಾಲುವೆಯಿಂದ ನೀರು ಪೂರೈಸುವ ಕುರಿತು ತಿಮ್ಮಲಾಪುರದ ಪಂಪ್ಹೌಸ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ತಹಸಿಲ್ದಾರ್ ತಂಡ ಮತ್ತೆ ಬೇಟಿ ನೀಡಿ ನೀರು ಪೂರೈಕೆಗೆ ಪರಿಶೀಲನೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ತಹಸಿಲ್ದಾರ್ ನಾಗರಾಜ ಮಾತನಾಡಿ, ರೈತರ ಉಪ ಕಾಲುವೆಗಳಿಂದ ಜಾಕ್ ವೆಲ್ ಮೂಲಕ ಕುಡುತಿನಿ ಕೆರೆಗೆ ನೀರು ಪೂರೈಸಲಾಗುತ್ತಿರುವುದರಿಂದ ಸಕಾಲಕ್ಕೆ ಕೆರೆ ತುಂಬಲು ಸಾಧ್ಯವಿಲ್ಲ ಎಂಬ ಜನರ ಆರೋಪದ ಮೇರೆಗೆ ಸಂಸದರು ಮತ್ತು ಶಾಸಕರು ಈಗಾಗಲೇ ಬೇಟಿ ನೀಡಿ ನೀರು ತುಂಬಿಸಲು ಹಲವು ಕ್ರಮ ಕೈಗೊಂಡಿದ್ದಾರೆ. ಅದರಂತೆ ನಾವು ಕೂಡ ಜನಪ್ರತಿನಿಧಿಗಳ ಇನ್ನಷ್ಟು ಗಮನಕ್ಕೆ ತಂದು ಎಚ್.ಎಲ್.ಸಿ ಕಾಲುವೆಯ ಮೂಲಕ ನೀರು ಹರಿಸಿ ಜನರ ಸಮಸ್ಯೆ ಬಗೆಹರಿಸುವ ಕಾರ್ಯ ನಡೆಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪಪಂ. ಸದಸ್ಯರಾದ ವೆಂಕರಮಣಬಾಬು, ನಾಗರಾಜ, ದೊಡ್ಡಬಸಪ್ಪ, ಕನಗಿರಿ ಪಂಪಾಪತಿ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 