ಕುರುಗೋಡು: ಕುಡಿಯುವ ನೀರಿನ ಸಮಸ್ಯೆ
ಲೋಕದರ್ಶನ ವರದಿ
ಕುರುಗೋಡು 18: ಪಟ್ಟಣ ಸಮೀಪದ ಕುಡಿತಿನಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಾಂಡವಾಡುತ್ತಿದ್ದ ಹಿನ್ನಲೆಯಲ್ಲಿ ಇದಕ್ಕೆ ಪರಿಹಾರ ಕಲ್ಪಿಸಲು ಸಂಸದ ವೈ.ದೇಂದ್ರಪ್ಪ ಇತ್ತಿಚ್ಚಿಗೆ ತಿಮ್ಮಲಾಪುರ ಬಳಿಯ ತುಂಗಭದ್ರಾ ಮೇಲ್ಮಟ್ಟದ ಕಾಲುವೆಯಿಂದ ನೀರು ಪೂರೈಸುವ ಕುರಿತು ತಿಮ್ಮಲಾಪುರದ ಪಂಪ್ಹೌಸ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ತಹಸಿಲ್ದಾರ್ ತಂಡ ಮತ್ತೆ ಬೇಟಿ ನೀಡಿ ನೀರು ಪೂರೈಕೆಗೆ ಪರಿಶೀಲನೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ತಹಸಿಲ್ದಾರ್ ನಾಗರಾಜ ಮಾತನಾಡಿ, ರೈತರ ಉಪ ಕಾಲುವೆಗಳಿಂದ ಜಾಕ್ ವೆಲ್ ಮೂಲಕ ಕುಡುತಿನಿ ಕೆರೆಗೆ ನೀರು ಪೂರೈಸಲಾಗುತ್ತಿರುವುದರಿಂದ ಸಕಾಲಕ್ಕೆ ಕೆರೆ ತುಂಬಲು ಸಾಧ್ಯವಿಲ್ಲ ಎಂಬ ಜನರ ಆರೋಪದ ಮೇರೆಗೆ ಸಂಸದರು ಮತ್ತು ಶಾಸಕರು ಈಗಾಗಲೇ ಬೇಟಿ ನೀಡಿ ನೀರು ತುಂಬಿಸಲು ಹಲವು ಕ್ರಮ ಕೈಗೊಂಡಿದ್ದಾರೆ. ಅದರಂತೆ ನಾವು ಕೂಡ ಜನಪ್ರತಿನಿಧಿಗಳ ಇನ್ನಷ್ಟು ಗಮನಕ್ಕೆ ತಂದು ಎಚ್.ಎಲ್.ಸಿ ಕಾಲುವೆಯ ಮೂಲಕ ನೀರು ಹರಿಸಿ ಜನರ ಸಮಸ್ಯೆ ಬಗೆಹರಿಸುವ ಕಾರ್ಯ ನಡೆಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪಪಂ. ಸದಸ್ಯರಾದ ವೆಂಕರಮಣಬಾಬು, ನಾಗರಾಜ, ದೊಡ್ಡಬಸಪ್ಪ, ಕನಗಿರಿ ಪಂಪಾಪತಿ ಸೇರಿದಂತೆ ಮತ್ತಿತರರು ಇದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 