ಇಂಡೋನೇಷ್ಯಾದಲ್ಲಿ ಭೂಕುಸಿತ: ನಾಲ್ವರ ಸಾವು
ಜಕಾರ್ತಾ, ಫೆ 20,ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಗುರುವಾರ ಸಂಭವಿಸಿದ ಪ್ರಕೃತಿ ವಿಕೋಪದ ಮಳೆ, ಭೂಕುಸಿತಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ಅಗಸ್ ವಿಬೊವೊ ತಿಳಿಸಿದ್ದಾರೆ.ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಬೊಗೊರ್ ಜಿಲ್ಲೆಯ ಸಿಬೊಲಾಂಗ್ ಗ್ರಾಮದಲ್ಲಿ ಅನೇಕ ಮನೆಗಳು ಹಾನಿಯಾಗಿದೆ ಎಂದೂ ವಕ್ತಾರರು ತಿಳಿಸಿದ್ದಾರೆ."ಹಾನಿಗೊಳಗಾದ ಮನೆಯಲ್ಲಿ ಪರಿಹಾರ ಕಾರ್ಯಕರ್ತರು ನಾಲ್ಕು ಶವಗಳನ್ನು ಹೊರ ತೆಗೆದಿದ್ದಾರೆ . ಸೈನಿಕರು, ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ಸ್ಥಳೀಯ ನಿವಾಸಿಗಳನ್ನು ಒಳಗೊಂಡ ಪರಿಹಾರ ಪಡೆಗಳಿಂದ ಪರಿಹಾರ ಕಾರ್ಯ ನಡೆಯುತ್ತಿದೆ.ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ.ಭಾರೀ ಮಳೆಯ ಸಮಯದಲ್ಲಿ ದೇಶದಲ್ಲಿ ಭೂಕುಸಿತ, ಪ್ರವಾಹ ಸಾಮಾನ್ಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 