ಇಂಡೋನೇಷ್ಯಾದಲ್ಲಿ ಭೂಕುಸಿತ: ನಾಲ್ವರ ಸಾವು
ಜಕಾರ್ತಾ, ಫೆ 20,ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಗುರುವಾರ ಸಂಭವಿಸಿದ ಪ್ರಕೃತಿ ವಿಕೋಪದ ಮಳೆ, ಭೂಕುಸಿತಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ಅಗಸ್ ವಿಬೊವೊ ತಿಳಿಸಿದ್ದಾರೆ.ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಬೊಗೊರ್ ಜಿಲ್ಲೆಯ ಸಿಬೊಲಾಂಗ್ ಗ್ರಾಮದಲ್ಲಿ ಅನೇಕ ಮನೆಗಳು ಹಾನಿಯಾಗಿದೆ ಎಂದೂ ವಕ್ತಾರರು ತಿಳಿಸಿದ್ದಾರೆ."ಹಾನಿಗೊಳಗಾದ ಮನೆಯಲ್ಲಿ ಪರಿಹಾರ ಕಾರ್ಯಕರ್ತರು ನಾಲ್ಕು ಶವಗಳನ್ನು ಹೊರ ತೆಗೆದಿದ್ದಾರೆ . ಸೈನಿಕರು, ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ಸ್ಥಳೀಯ ನಿವಾಸಿಗಳನ್ನು ಒಳಗೊಂಡ ಪರಿಹಾರ ಪಡೆಗಳಿಂದ ಪರಿಹಾರ ಕಾರ್ಯ ನಡೆಯುತ್ತಿದೆ.ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ.ಭಾರೀ ಮಳೆಯ ಸಮಯದಲ್ಲಿ ದೇಶದಲ್ಲಿ ಭೂಕುಸಿತ, ಪ್ರವಾಹ ಸಾಮಾನ್ಯವಾಗಿದೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 