ಹೊಸ ಭೂಕುಸಿತ, ಶ್ರೀನಗರ-ಜಮ್ಮು ರಸ್ತೆ ಸಂಚಾರ ಮತ್ತೆ ಬಂದ್
ಶ್ರೀನಗರಮಾರ್ಚ್ 11, ಹೊಸ ಭೂಕುಸಿತ , ಪ್ರತಿಕೂಲ ಹವಾಮಾನದ ಕಾರಣ 270 ಕಿ.ಮೀ ಉದ್ದದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಸಂಚಾರ ಮತ್ತೆ ಸ್ಥಗಿತವಾಗಿದೆ. ಈ ನಡುವೆ ಲಡಾಕ್ನ ಕೇಂದ್ರಾಡಳಿತ ಪ್ರದೇಶವನ್ನು (ಯುಟಿ) ಕಾಶ್ಮೀರದೊಂದಿಗೆ ಸಂಪರ್ಕಿಸುವ ಬೀಕನ್ ಹೆದ್ದಾರಿಯಲ್ಲಿ ಬೃಹತ್ ಹಿಮ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಹಿಮದ ಕಾರಣ 434 ಕಿ.ಮೀ ಉದ್ದದ ಶ್ರೀನಗರ-ಲೇಹ್ ಹೆದ್ದಾರಿ ಕಳೆದ ಮೂರು ತಿಂಗಳಿನಿಂದ ಮುಚ್ಚಿದೆ. 86 ಕಿ.ಮೀ ಉದ್ದದ ಐತಿಹಾಸಿಕ ಮೊಘಲ್ ರಸ್ತೆ ಮತ್ತು ಅನಂತ್ನಾಗ್-ಕಿಶ್ತ್ವಾರ್ ರಸ್ತೆ ಕಳೆದ ಎರಡು ತಿಂಗಳುಗಳಿಂದ ಹಿಮದ ಕಾರಣ ಮುಚ್ಚಿದೆ. ಸಂಚಾರ ಮತ್ತು ಎನ್ಎಚ್ಎಐ ಅಧಿಕಾರಿಗಳಿಂದ ಹಸಿರು ನಿಶಾನೆ ದೊರಕಿದ ನಂತರ ಲ್ ಬಂದ ನಂತರ ಸಂಚಾರ ಮತ್ತೆ ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಹಿಮ ಮತ್ತು ಮಳೆಯಾಗುವ ಮುನ್ಸೂಚನೆ ಇದೆ ಎಂದರು. ಶ್ರೀನಗರ-ಜಮ್ಮು ಹೆದ್ದಾರಿಗೆ ಪರ್ಯಾಯ ರಸ್ತೆಯ ಮೂಲಕ ಹೋಗಲು ಇನ್ನೂ ಎರಡು ತಿಂಗಳು ಸಮಯ ಬೇಕಾಗುತ್ತದೆ. ಹಿಮದಿಂದಾಗಿ ಅನಂತ್ನಾಗ್-ಕಿಶ್ತ್ವಾರ್ ರಸ್ತೆ ಸಹ ಮುಚ್ಚಲ್ಪಟ್ಟಿದ್ದು ಸಂಚಾರಕ್ಕೆ ತೊಂದರೆಯಾಗಿದೆ ಎಂದೂ ಅವರು ಹೇಳಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 