6ನೇ ತರಗತಿ ಕನ್ನಡ ಪುಸ್ತಕದ ವಿರುದ್ಧ ಎಲ್ಡಿಎಸ್ಒ ಆಕ್ಷೇಪ
LDSO objects to 6th-standard Kannada textbook
ವಿಜಯನಗರ 26: ಎನ್ಸಿಇಆರ್ಟಿಯು ಸಿಬಿಎಸ್ಇಯ 6ನೇ ತರಗತಿಯ ಕನ್ನಡ ಪುಸ್ತಕವನ್ನು ಬಿಡುಗಡೆ ಮಾಡಿದೆ. ಈ ಪುಸ್ತಕಕ್ಕೆ ಕೃಷ್ಣ’ ಎಂದು ಹೆಸರಿಟ್ಟಿದೆ. ಕನ್ನಡದ ವೈಚಾರಿಕ ಪರಂಪರೆ, ಸಂಸ್ಕೃತಿಯನ್ನು ಬದಿಗೆ ಸರಿಸಿ ಈ ಪುಸ್ತಕವನ್ನು ಪ್ರಕಟಿಸುವ ಮೂಲಕ ಎನ್ಸಿಇಆರ್ಟಿ ರಾಜಕೀಯ-ಸಾಂಸ್ಕೃತಿಕ ದಬ್ಬಾಳಿಕೆ ನಡೆಸಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ’ ಪ್ರಕಟಿಸಿದ ಪಠ್ಯಪುಸ್ತಕಗಳಿದ್ದರೂ ಅವುಗಳನ್ನು ಪರಿಗಣಿಸದೇ, ಕನ್ನಡದ ಅಸ್ಮಿತೆಗೆ ಅಪಚಾರವೆಸಗುವ ಈ ಪುಸ್ತಕವನ್ನು ಎನ್ಸಿಇಆರ್ಟಿಯು ನಾಡಿನ ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಈ ದಾಳಿಯು ಎನ್ಈಪಿ-2020ರ ಹೇರಿಕೆಯ ಭಾಗವಾಗಿದೆ. ಈ ಪಠ್ಯ ಪುಸ್ತಕದ ತಯಾರಿಯಲ್ಲಿ ಕೂಡ ನಾಡಿನ ಯಾವುದೇ ಶಿಕ್ಷಣ ತಜ್ಞರು ಹಾಗೂ ಚಿಂತಕರೊಂದಿಗೆ ಸಮಾಲೋಚನೆ ನಡೆಸಿಲ್ಲ. ಎನ್ ಸಿ ಈ ಆರ್ ಟಿಯ ಈ ಅಪ್ರಜಾತಾಂತ್ರಿಕ ಮತ್ತು ಧಮನಕಾರಿ ನಡೆಯನ್ನು ಎಐಡಿಎಸ್ಓ ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ.
ಅಲ್ಲದೆ, ಸಮತೋಲನ ಆಹಾರ’ ಪಾಠದಲ್ಲಿ ಉದ್ದೇಶಪೂರ್ವಕವಾಗಿ ಮೀನು, ಮಾಂಸದ ವಿಷಯಗಳನ್ನು ಕೈಬಿಟ್ಟು ಕೇವಲ ಸಸ್ಯಹಾರಗಳ್ನನಷ್ಟೇ ಉಲ್ಲೇಖಿಸಲಾಗಿದೆ. ಕೂಡಲೇ ಎನ್ಸಿಇಆರ್ಟಿ ಈ ಪುಸ್ತಕವನ್ನು ಹಿಂಪಡೆಯಬೇಕೆಂದು ಎಐಡಿಎಸ್ಓ ವಿಜಯನಗರ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ. ಕನ್ನಡದ ಶ್ರೀಮಂತ ಸಾಹಿತ್ಯ ಪರಂಪರೆಯ ಚಹರೆ ಈ ಪಠ್ಯ ಪುಸ್ತಕದಲ್ಲಿ ಎಳ್ಳಷ್ಟೂ ಇಲ್ಲ ಎಂಬುದು ವಿಷಾದನೀಯ. ರಾಜ್ಯ ಸರ್ಕಾರ, ಆಚಾರ-ವಿಚಾರಗಳನ್ನು ಒಳಗೊಂಡ, ಸಾಹಿತ್ಯ-ಸಾಂಸ್ಕೃತಿಕ ಪರಂಪರೆಯ ಪರಿಚಯ ಮಾಡಿಕೊಡುವ ಪುಸ್ತಕವನ್ನು ಸಿದ್ಧಪಡಿಸಿ, ವಿದ್ಯಾರ್ಥಿಗಳಿಗೆ ಒದಗಿಸಬೇಕು. ಶಿಕ್ಷಣದ ವಿಷಯದಲ್ಲಿ ರಾಜ್ಯ ಸರ್ಕಾರವು ನಿರ್ಣಾಯಕ ಪಾತ್ರ ಹೊಂದಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸ್ಪಷ್ಟ ನಿಲುವು ತೆಗೆದುಕೊಂಡು ಎನ್ ಸಿ ಇ ಆರ್ ಟಿ ಪುಸ್ತಕವನ್ನು ತಿರಸ್ಕರಿಸಬೇಕೆಂದು ಎಐಡಿಎಸ್ಓ ವಿಜಯನಗರ ಜಿಲ್ಲಾ ಸಮಿತಿಯು ಮಾನ್ಯ ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 