ಶ್ರಮಜೀವಿಗಳಿಗೆಂದೇ ಮೀಸಲಾದ ದಿನ ಕಾರ್ಮಿಕರ ದಿನ: ಸಿದ್ರಾಮ ಕಾಸೆ
ಶ್ರಮಜೀವಿಗಳಿಗೆಂದೇ ಮೀಸಲಾದ ದಿನ ಕಾರ್ಮಿಕರ ದಿನ: ಸಿದ್ರಾಮ ಕಾಸೆ
ವಿಜಯಪುರ 01: ಕಾರ್ಮಿಕರು ಜಗತ್ತಿನ ಆಸ್ತಿ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸುವುದಕ್ಕೇ ಸಾಧ್ಯವಿಲ್ಲ. ಇಂತಹ ಶ್ರಮಜೀವಿಗಳನ್ನು ಗೌರವಿಸುವ, ಅವರ ಸೇವೆಯನ್ನು ಸ್ಮರಿಸುವ ದಿನವಾಗಿ ಪ್ರತಿವರ್ಷ ‘ಅಂತಾರಾಷ್ಟ್ರೀಯ ಕಾರ್ಮಿಕರ ದಿನ’ವನ್ನು ಆಚರಿಸಲಾಗುತ್ತದೆ ಎಂದು ರವಿ ಇಂಡಸ್ಟ್ರೀಸ್ ಮಾಲೀಕರಾದ ಸಿದ್ರಾಮ ಕಾಸೆ ಹೇಳಿದರು.
ಅವರು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕ ದಿನಾಚರಣೆ ನಿಮಿತ್ಯವಾಗಿ ಕಾರ್ಮಿಕರಿಗೆ ಸಿಹಿ ವಿತರಿಸಿ ಶಾಲು ಹೊದಿಸಿ ಸನ್ಮಾನಿಸದ ಸಂದರ್ಭದಲ್ಲಿ ಮಾತನಾಡಿದರು. ಮೇ 1 ಅಂತಾರಾಷ್ಟ್ರೀಯ ಕಾರ್ಮಿಕರ ದಿನ. ಇದು ಶ್ರಮಜೀವಿಗಳಿಗೆಂದೇ ಮೀಸಲಾದ ದಿನ. ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಪಟ್ಟು ದುಡಿಯುವ ಕೆಲಸಗಾರರು ದೇಶ, ರಾಜ್ಯದ ಅಭಿವೃದ್ಧಿಗೆ ಹೆಗಲು ಕೊಡುತ್ತಾರೆ. ಇಂತಹ ಶ್ರಮಜೀವಿಗಳ ಪ್ರಯತ್ನ, ಕೆಲಸದಲ್ಲಿಯೇ ದೇಶದ ಅಭಿವೃದ್ಧಿಯಡಗಿದೆ. ಹೀಗೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಶ್ರಮ ಮತ್ತು ಸೇವೆಯನ್ನು ಗೌರವಿಸುವ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ ನಮ್ಮ ಕರ್ತವ್ಯವಾಗಿದೆ ಎಂದರು.
ನೇತಾ, ಬಡಕನ, ಬುಲಾಯಿ, ಗೋಪಾಲ ಕಾರ್ಮಿಕರಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಬಸವರಾಜ ಮಲಘಾಣ, ಉಮೇಶ ಶಿವಶರಣ, ಸುರೇಶ ಜಾಧವ, ಶ್ರೀನಿವಾಸ ವಾಘ್ಮೋರೆ, ಶ್ರೀಕಾಂತ ಬಂಡಿವಡ್ಡರ, ಭೀಮಶಿ, ಗೋವಿಂದ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 