ಕಾರ್ಮಿಕ- ನೌಕರರ ವಿರೋಧಿ ತೀರ್ಮಾನ: ಕಪ್ಪುಪಟ್ಟಿ ಪ್ರತಿಭಟನೆ
ಬೆಂಗಳೂರು, ಜೂನ್ 2, ಯಡಿಯೂರಪ್ಪ ನೇತೃತ್ವದ ಸರ್ಕಾರದ ಕಾರ್ಮಿಕ ಹಾಗೂ ನೌಕರರ ವಿರೋಧಿ ಕ್ರಮ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಇದೆ ಗುರುವಾರ ವಿರುದ್ಧ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ.ಅಂದು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ. ಎಂದು ಸರ್ಕಾರಿ ನೌಕರರ ಒಕ್ಕೂಟ ಹೇಳಿದೆ.ವಿವಿಧ ಇಲಾಖೆಗಳನ್ನು ವಿಲೀನ ಮಾಡಲು ಹೊರಟಿರುವುದು, ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಹೆಚ್ಚಳ ಮಾಡಲು ಮುಂದಾಗಿರುವುದು ಸೇರಿದಂತೆ ಸರ್ಕಾರದ ಕಾರ್ಮಿಕ ಮತ್ತು ನೌಕರ ವಿರೋಧಿ ತೀರ್ಮಾನ ಖಂಡಿಸಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.ಇದೆ ಗುರುವಾರ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ. ಆದರೆ, ಎಲ್ಲರೂ ಅಂದು ಕೈಗೆ ಕಪ್ಪುಪಟ್ಟಿ ಧರಿಸಿ ಕೆಲಸ ಮಾಡಲಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳ ಕುರಿತು ಮನವಿ ಸಲ್ಲಿಸುವ ನಿರೀಕ್ಷೆ ಇದೆ.ರಾಜ್ಯ ಸರ್ಕಾರ ಕೈಗಾರಿಕೆ ಹಾಗೂ ಇನ್ನಿತರ ಉದ್ಯಮ ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗಳಿಗೆ ವಿಸ್ತರಣೆ ಮಾಡಿ, ಇದು ಮೇ 22ರಿಂದ ಆಗಸ್ಟ್ 21ರ ತನಕ ಹೊಸ ಆದೇಶ ಜಾರಿಯಲ್ಲಿರುತ್ತದೆ ಎಂದು ಕಾರ್ಮಿಕ ಇಲಾಖೆ ಹೇಳಿತ್ತು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 