ಇಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Labor Minister Santhosh Lad's visit to Koppal district today
ಕೊಪ್ಪಳ 17: ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 18 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಮಧ್ಯಾಹ್ನ 2 ಗಂಟೆಗೆ ಗದಗದಿಂದ ರಸ್ತೆಯ ಮೂಲಕ ಹೊರಟು, 3.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್ನಲ್ಲಿ ನಡೆಯುವ ಕೊಪ್ಪಳ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಸಂಜೆ 5 ಗಂಟೆಗೆ ಪಕ್ಷದ ಕಛೇರಿಗೆ ಭೇಟಿ ನೀಡುವರು. ಬಳಿಕ ಅಂದು ಸಂಜೆ 6 ಗಂಟೆಗೆ ಕೊಪ್ಪಳದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕುಕನೂರು, ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಜು. 24ರಂದು ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ದಾಖಲಾತಿ ಪರೀಶೀಲನೆ
ಕೊಪ್ಪಳ 17: ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ದಾಖಲಾತಿ ಪರೀಶೀಲನೆಯು ಜುಲೈ 24ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಹಾಗೂ ಗಂಗಾವತಿಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ತಾಣ ತಿತಿತಿ.ಞಠಠಿಚಿಟ.ಟಿಛಿ.ಟಿ ನಲ್ಲಿ ಪ್ರಚುರಪಡಿಸಿದ್ದು, ಅಂತಿಮ ಆಯ್ಕೆ ಪಟ್ಟಿಗಯಲ್ಲಿರುವ ಅಭ್ಯರ್ಥಿಗಳು ತಾವು ಅಪ್ಲೋಡ್ ಮಾಡಿರುವ ಮೂಲ ದಾಖಾಲಾತಿ ಪರೀಶೀಲನೆಗಾಗಿ ಜು. 24ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಪ್ಪಳ ಇವರ ಕಾರ್ಯಾಲಯಕ್ಕೆ ಹಾಜರಾಗಬೇಕು. ನಿಗದಿಪಡಿಸಿದ ದಿನಾಂಕದಂದು ಹಾಜರಾಗದೇ ಇರುವ ಅಭ್ಯರ್ಥಿಗಳನ್ನು ಬಿಟ್ಟು ಸಾಮಾನ್ಯ ಅರ್ಹಾತಾ ಪಟ್ಟಿಯಲ್ಲಿರುವ ಮುಂದಿನ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ನಂತರದಲ್ಲಿ ಬಂದ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ಹತ್ತಿ ಬೆಳೆಯ ಪ್ರಮುಖ ಕೀಟಗಳ ಸಮಗ್ರ ನಿರ್ವಹಣೆ: ರೈತರಿಗೆ ಸಲಹೆ
ಕೊಪ್ಪಳ 17: ಹತ್ತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳಾದ ಮಿರಿಡ್ ತಿಗಣೆ, ಥ್ರೀಪ್ಸ್, ಹಿಟ್ಟು ತಿಗಣೆ, ಹಸಿರು ಜಿಗಿಹುಳು, ಬಿಳಿನೊಣ, ಗುಲಾಬಿ ಕಾಯಿಕೊರಕದ ಸಮಗ್ರ ನಿರ್ವಹಣಾ ಕ್ರಮಗಳ ಕುರಿತು ಕೃಷಿ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಹತೋಟಿ ಕ್ರಮಗಳು: ಹತ್ತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳ ಹತೋಟಿಗಾಗಿ ರೈತರು ಬೇಸಿಗೆಯಲ್ಲಿ ಆಳವಾಗಿ ಉಳುಮೆ ಮಾಡುವುದು. ಹತ್ತಿ ಬೆಳೆಯ ಅವಧಿ ಮುಗಿದ ನಂತರ ಗಿಡಗಳನ್ನು ಟ್ಯಾಕ್ಟರ್ ಚಾಲಿತ ಕೇಡರ್ನಿಂದ ಕಿತ್ತು ಪುಡಿ ಮಾಡಿ ಸೇರಿಸುವುದು. ಬಾದೆಗೊಳಗಾದ ಕಾಯಿಗಳನ್ನು ಹತ್ತಿ ಗಿಡದಿಂದ ಕಿತ್ತು ನಾಶಪಡಿಸಬೇಕು. ಆಶ್ರಯ ಕಳೆಗಳಾದ ಅಬುಟಿಲಾನ್, ಪಾರ್ಥೆನಿಯಮ್, ವಿಭೂತಿ ಗಿಡ ಮತ್ತು ಇತರ ಕಳೆಗಳನ್ನು ಕಿತ್ತು ನಾಶಮಾಡುವುದು. ಹತ್ತಿ ಬೆಳೆಯ ಸುತ್ತಲು ನಾಲ್ಕು ಸಾಲು ಸಜ್ಜೆ ಬೆಳೆಯುವುದರಿಂದ ಸ್ವಲ್ಪ ಮಟ್ಟಿಗಾದರು ಡ್ರಿಪ್ಸ್ ನುಸಿ ಮತ್ತು ಹಿಟ್ಟು ತಿಗಣೆ ಕೀಟಗಳ ಬಾಧೆಯನ್ನು ನಿಯಂತ್ರಿಸಬಹುದು. ಆಯಾ ಪ್ರದೇಶಕ್ಕೆ ಶಿಫಾರಸ್ಸು ಮಾಡಿದ ಬಿಟಿ ಹತ್ತಿಯ ಶಕ್ತಿಮಾನ್ ತಳಿಗಳನ್ನು ಅದರಲ್ಲೂ ಮೂರನೆ ಸಂತತಿಯ (31 ರಜಟಿಜಡಿಚಿಣಠ ಃಣ. ಅಠಣಠ) ತಳಿಗಳನ್ನು ಉಪಯೋಗಿಸಬೇಕು. ಬಿತ್ತನೆಗೆ ಮೊದಲು
ಪ್ರತಿ ಕೆ.ಜಿ. ಬಿಟಿ ಹತ್ತಿ ಬೀಜಕ್ಕೆ 15 ಮಿ.ಲೀ ಇಮಿಡಾಕ್ಲೋಪ್ರಿಡ್ 60 ಎಫ್.ಎಸ್. ದಿಂದ ಬೀಜೋಪಚಾರ ಮಾಡಿದ ಕಾರಣ ಮೊದಲ ಹಂತದಲ್ಲಿ ಬರುವ ರಸ ಹೀರುವ ಕೀಟಗಳನ್ನು (ಒಂದು ತಿಂಗಳವರೆಗೆ) ನಿಯಂತ್ರಿಸಬಹುದು. ಅರ್ಕಷಕ ಬೆಳೆಯಾಗಿ ಬೆಂಡೆ. ಹಳದಿ ಚೆಂಡು ಹೂವು ಮತ್ತು ತೊಗರಿ ಬೆಳೆಯನ್ನು ಬೆಳೆಯುವುದು. ರಸ ಹೀರುವ ಕೀಟಗಳನ್ನು ನಿಯಂತ್ರಿಸಲು ಪ್ರತಿ ಎಕರೆಗೆ 10 ರಂತೆ ಹಳದಿ ಬಣ್ಣದ ಅಂಟಿನ ಬಲೆಗಳನ್ನು ಬೆಳೆಯ ಒಂದು ಅಡಿ ಎತ್ತರಕ್ಕೆ ನೆಡಬೇಕು. ಕಾಯಿಕೊರಕ ಕೀಟದ ಸಮೀಕ್ಷೆಗಾಗಿ ಪ್ರತಿ ಹೆಕ್ಟೇರಿಗೆ 5 ರಂತೆ ಲಿಂಗಾಷರ್ಕ ಬಲೆಗಳನ್ನು ಉಪಯೋಗಿಸಬೇಕು.
ಗುಲಾಬಿ ಕಾಯಿಕೊರಕದ ತತ್ತಿಗಳನ್ನು ನಾಶಪಡಿಸಲು ಟ್ರೈಕೋಗ್ರಾಮ ಬ್ಯಾಕ್ಟೇರಿಯಾ ಎಂಬ ಪರತಂತ್ರ ಜೀವಿಯನ್ನು ಎಕರೆಗೆ 60000 ರಂತೆ ಬೆಳೆಯು 70 ರಿಂದ 75 ಹಾಗೂ 80 ರಿಂದ 85 ದಿವಸವಿದ್ದಾಗ ಬಿಡಬೇಕು. ಕ್ರಿಮಿಟ್-ಪಿ.ಬಿ.ಡಬ್ಲೂ (ಅಖಇಒಋ-ಕಃಘ) ಎಂಬ ವಿನೂತನ ಅಂಟುರೂಪದ ಪದಾರ್ಥಗಳನ್ನು 35 ರಿಂದ 40 ದಿವಸದ ಬೆಳೆಯಿದ್ದಾಗ ಎಕರೆಗೆ 125 ಗ್ರಾಂ ನಂತೆ 400 ಗಿಡಗಳ ಕುಡಿಯ ಮೇಲೆ ಹಚ್ಚಬೇಕು. ಇದೇ ರೀತಿಯಾಗಿ 125 ಗ್ರಾಂ. ಸ್ಟ್ರಾಟ್ ಅನ್ನು ಬೆಳೆಯು 65 ರಿಂದ 70, 95 ರಿಂದ 100 ಮತ್ತು 125 ರಿಂದ 130 ದಿವಸವಿದ್ದಾಗ ಹಚ್ಚುವುದರಿಂದ ಗಂಡು ಮತ್ತು ಹೆಣ್ಣು ಪತಂಗಗಳು ಸಂಯೋಗ ಹೊಂದದಂತೆ ಮಾಡಿ ಮುಂದಿನ ಸಂತತಿಯನ್ನು ಗಣನೀಯವಾಗಿ ಕಡಿಮೆಗೊಳಿಸಬಹುದು. ಪಿ.ಬಿ. ರೋಪೆನ್ನು (ಕಃ-ಖಓಕಇಐ) ಒಂದು ಎಕರೆಗೆ 150 ರಂತೆ ಅಥವಾ 1 ರೋಪಲ್ ಪ್ರತಿ 50 ಚದರ ಮಿಗೆ ಹತ್ತಿ ಬೆಳೆಯ ಕಾಂಡದ ಮಧ್ಯ ಭಾಗಕ್ಕೆ 40 ರಿಂದ 50 ದಿನಗಳೊಳಗಾಗಿ ಕಟ್ಟಬೇಕು.
ಕೀಟನಾಶಕಗಳ ಸಿಂಪರಣೆ ಬೆಳೆಯ ಮೊದಲನೇ ಹಂತದಲೀ ಬರುವ ರಸ ಹೀರುವ ಕೀಟಗಳ ಹತೋಟಿಗಾಗಿ 0.8 ಮಿ.ಲೀ. ಆಫಿಡೋಪೈರೊಪೆನ್ 10 ಇ.ಸಿ. ಅಥವಾ 0.30 ಗ್ರಾಂ ಡೈನೋಟಿಪ್ಯೂರ್ನ್ 20 ಎಸ್.ಜಿ. ಅಥವಾ 0.5 ಮಿ. ಲೀ. ಸೈನೊಚಿರಮ್ 11.7 ಎಸ್.ಸಿ ಅಥವಾ 0.4 ಗ್ರಾಂ ಪೋನಿಕ್ ಆಮೈಡ್ 50 ಡಬ್ಲ್ಯೂ.ಜಿ ಒಂದು ಲೀ. ನೀರಿನ ಬೆರೆಸಿ ಸಿಂಪಡಿಸುವುದರಿಂದ ಹತೋಟಿ ಮಾಡಬಹುದು. ಮೈಟ್ ನುಸಿ ಹಾವಳಿ ಕಂಡು ಬಂದಲ್ಲಿ ಪ್ರತಿ ಲೀಟರ್ ಸಿಂಪರಣಾ ದ್ರಾವಣಕ್ಕೆ 1 ಗ್ರಾಂ. ಡೈಫ್ರೆಂಥೀಯುರಾನ್ 50 ಡಬ್ಲೂ.ಜಿ ಅಥವಾ 1 ಮೀ.ಲೀ. ಸೈರೊಮೆಸಿಫೆನ್ 24 ಎಸ್.ಸಿ ಬೆರೆಸಿ ಸಿಂಪಡಿಸಬೇಕು. ಗುಲಾಬಿ ಕಾಯಿಕೊರಕದ ಭಾಧೆ ಕಂಡು ಬಂದಲ್ಲಿ ಶೇ.5ರ ಬೆಳೆಯ ಜೀವಿನ ಕಷಾಯಿ ಅಥವಾ ಬೇವಿನ ಮೂಲದ ಕೀಟನಾಶಕ 3 ಮಿ.ಲೀ ಅಥವಾ 1 ಮಿ.ಲ್ಲಿ ಲ್ಯಾಮ್ಯಾಸಹಿರೋಡ್ರಿನ್ 5 ಇ.ಸಿ. ಅಥವಾ 2 ಮಿ.ಲೀ. ಪ್ರೋಫೆನೋಫಾಸ್ 50 ಇ.ಸಿ. ಅಥವಾ 0.5 ಮಿ.ಲಿ.ಸ್ಪೈನೋಟೆರಮ್ 11 ಎಸ್.ಸಿ. ಪ್ರತಿ ಲೀಟರ್ ನೀರಿಗೆ ಬೆರೆಸಿ ಕೀಟನಾಶಕವನ್ನು ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲೆಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಸಂಪರ್ಕಿಸುವಂತೆ ಕೊಪ್ಪಳ ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 