ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ: ಕಾರ್ಮಿಕ ಸಚಿವ ಸಂತೋಷ್ ಲಾಡ್
Labor Minister Santosh Lad considering amending labor kit distribution rules
ಬೆಳಗಾವಿ ಸುವರ್ಣವಿಧಾನಸೌಧ ಡಿ.11: ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ ಕಾರ್ಮಿಕರಿಗೆ ಕಿಟ್ ನೀಡಲು ಸದ್ಯ ಇರುವ ನಿಯಮಗಳಲ್ಲಿ ಅವಕಾಶವಿಲ್ಲ. ಈ ನಿಯಮಕ್ಕೆ ಮಾರ್ಪಾಡು ತಂದು 5 ವರ್ಷಗಳ ಕಾಲಮಿತಿಯನ್ನು ನಿಗದಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ಶಾಸಕ ಹರೀಶ್ ಪೂಂಜಾ ಅವರ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು.
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಟೂಲ್ ಕಿಟ್ ಪಡೆಯುವ ಫಲಾನುಭವಿಗಳಿಗೆ ಕಾಲಮಿತಿ ನಿಗದಿ ಮಾಡಲಾಗುವುದು. ಶೇ.13ರಷ್ಟು ಕಾರ್ಮಿಕ ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಎಂದು ವರದಿ ಬಂದಿದೆ. ಆದ್ದರಿಂದ ಸರ್ಕಾರ ಪೌಷ್ಠಿಕ ಆಹಾರದ ಕಿಟ್ಗಳನ್ನು ನೀಡಲು ಸಿದ್ದತೆ ನಡೆಸಿದೆ. ವ್ಯಾಸಾಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಈ ಹಿಂದೆ ಶಾಲಾಕಿಟ್ ನೀಡಲಾಗುತ್ತಿತ್ತು. ಇದರ ಬದಲಾಗಿ ವಿದ್ಯಾರ್ಥಿವೇತನ ನೀಡುತ್ತಿರುವುದಾಗಿ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.
ಇದೇ ವೇಳೆ ರಾಣೆಬೆನ್ನೂರು ಇ.ಎಸ್.ಐ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರನ್ನು ನೇಮಿಸುವುದಾಗಿ ಸಚಿವ ಸಂತೋಷ್ ಲಾಡ್ ಶಾಸಕ ಪ್ರಕಾಶ್ ಕೆ.ಕೋಳಿವಾಡ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 