ಕೆರೆ ಕಟ್ಟೆಗಳು ರೈತರ ಜೀವನಾಡಿ ಶಾಸಕ ಬಸವರಾಜ ಶಿವಣ್ಣನವರ
Lake banks are the lifeline of farmers, says MLA Basavaraja Shivanna
ಲೋಕದರ್ಶನ ವರದಿ
ಬ್ಯಾಡಗಿ 18: ಗ್ರಾಮಗಳಲ್ಲಿ ಕೆರೆ ಕಟ್ಟೆಗಳು ರೈತರ ಜೀವನಾಡಿಗಳಾಗಿದ್ದು ರೈತರಿಗೆ ಹೋಲಗಳಿಗೆ ಸಕಾಲಕ್ಕೆ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ದನಕರಗಳ ನೀರು ಕುಡಿಯಲು ಕೆರೆಗಳು ಅಭಿವೃದ್ಧಿ ಹೊಂದಿದರೆ ರೈತರು ಅಭಿವೃದ್ಧಿ ಹೊಂದಿದಂತಾಗುತ್ತದೆ ಎಂದು ಶಾಸಕ ಬಸವರಾಜ್ ಶಿವಣ್ಣನವರು ಅಭಿಪ್ರಾಯ ಪಟ್ಟರು. ತಾಲೂಕಿನ ಬುಡುಪನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಅನುದಾನದಲ್ಲಿ ಸುಮಾರು 83 ಲಕ್ಷ ವೆಚ್ಚದಲ್ಲಿ ಕೆರೆಯ ಅಭಿವೃದ್ಧಿ ಯೋಜನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿರುವರು.
ಈ ಭಾಗದ ಅಂತರ್ಜಲ ಮಟ್ಟ ವೃದ್ಧಿಗೆ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಇದರಿಂದ ಮಳೆ ನೀರು ಕೆರೆಗಳಲ್ಲಿ ಸಂಗ್ರಹಿಸುವ ಮೂಲಕ ಅಂತರ್ಜಲ ಪ್ರಮಾಣ ವೃದ್ಧಿಸಲಿದೆ ಮತ್ತು ಕೆರೆ ನೀರು ಸಂರಕ್ಷಣೆ ಮಾಡುವುದು ಮತ್ತು ಪ್ರತಿಯೊಬ್ಬರು ಮುಂದಿನ ಪೀಳಿಗೆಗಾಗಿ ನೀರನ್ನು ಸಂರಕ್ಷಣೆ ಮಾಡುವುದು ಕಲಿಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ದಾನಪ್ಪ ಚೂರಿ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ನಾಗರಾಜ ಆನ್ವೇರಿ. ಡಾಕ್ಟರ್ ಪುಟ್ಟಯ್ಯ ಬಿಕ್ಷಾವರ್ತಿ ಮಠ. ಹನುಮಂತಪ್ಪ ಹಾದಿಮನಿ. ಹುಚ್ಚಪ್ಪ ಪೂಜಾರ್. ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರೇವಣಪ್ಪ ಟಿ ಆರ್. ಗುತ್ತಿಗೆದಾರದ ಕರಿಯಪ್ಪ ನಡುವಿನ ಮನಿ. ಅಭಿವೃದ್ಧಿ ಅಧಿಕಾರಿ ಪ್ರವೀಣ್ ಸೇರಿದಂತೆ ಗ್ರಾಮದ ಅನೇಕ ಹಿರಿಯರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 