ಆಶ್ರಮದಲ್ಲಿನ ವೃದ್ದರನ್ನು ಸಂತೈಸಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ, 27: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಟ್ಟಲವಾಡಿ ಗ್ರಾಮದ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ್ದರು.
ಅದೊಂದು ಭಾವನಾತ್ಮಕ ಕ್ಷಣ... ಅಲ್ಲಿಯ ವೃದ್ದರನ್ನು ಸಂತೈಸಿದರು... ಅವರ ಯೋಗಕ್ಷೇಮ ವಿಚಾರಿಸಿದರು. ಅವರ ಕಥೆ ಕೇಳಿ ಮರುಗಿದರು... ವೃದ್ದಾಶ್ರಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಪರಿಸ್ಥಿತಿಯನ್ನು ವೀಕ್ಷಿಸಿದರು.
ವೃದ್ದಾಶ್ರಮದ ಹೊಸ ಕಟ್ಟಡದ ಸ್ಲ್ಯಾಬ್ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕಿ ಹೆಬ್ಬಾಳಕರ್, ಅಲ್ಲಿನ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಈ ವೃದ್ದಾಶ್ರಮವು ನೊಂದ ಜೀವಿಗಳಿಗೆ ಸಂಜೀವಿನಿಯಾಗಿದ್ದು, ವೃದ್ದಾಶ್ರಮಕ್ಕೆ ತಮ್ಮಿಂದಾದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ವಿಜಯ ಮೊರೆ, ಯುವರಾಜ ಕದಂ, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ನಾಗೇಶ ಚೌಹಾಣ ಮೊದಲಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 