ಆಶ್ರಮದಲ್ಲಿನ ವೃದ್ದರನ್ನು ಸಂತೈಸಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ, 27: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಟ್ಟಲವಾಡಿ ಗ್ರಾಮದ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ್ದರು.
ಅದೊಂದು ಭಾವನಾತ್ಮಕ ಕ್ಷಣ... ಅಲ್ಲಿಯ ವೃದ್ದರನ್ನು ಸಂತೈಸಿದರು... ಅವರ ಯೋಗಕ್ಷೇಮ ವಿಚಾರಿಸಿದರು. ಅವರ ಕಥೆ ಕೇಳಿ ಮರುಗಿದರು... ವೃದ್ದಾಶ್ರಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಪರಿಸ್ಥಿತಿಯನ್ನು ವೀಕ್ಷಿಸಿದರು.
ವೃದ್ದಾಶ್ರಮದ ಹೊಸ ಕಟ್ಟಡದ ಸ್ಲ್ಯಾಬ್ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕಿ ಹೆಬ್ಬಾಳಕರ್, ಅಲ್ಲಿನ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಈ ವೃದ್ದಾಶ್ರಮವು ನೊಂದ ಜೀವಿಗಳಿಗೆ ಸಂಜೀವಿನಿಯಾಗಿದ್ದು, ವೃದ್ದಾಶ್ರಮಕ್ಕೆ ತಮ್ಮಿಂದಾದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ವಿಜಯ ಮೊರೆ, ಯುವರಾಜ ಕದಂ, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ನಾಗೇಶ ಚೌಹಾಣ ಮೊದಲಾದವರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 