ಮಾಜಿ ಸೈನಿಕರ ಸಂಘಕ್ಕೆ ಜಾಗ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ಗೆ ಸನ್ಮಾನ
Land allotted to Ex-Servicemen's Association: Minister Lakshmi Hebbalkar felicitated
ಬೆಳಗಾವಿ 09: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯ ಜೈ ಗಣೇಶ ಎಕ್ಸ್ -ಸರ್ವಿಸ್ ಮ್ಯಾನ್ ಅಸೋಸಿಯೇಷನ್ (ಸರಸ್ವತಿ ನಗರ) ಕಟ್ಟಡ ನಿರ್ಮಾಣಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಾಗವನ್ನು ಮಂಜೂರು ಮಾಡಿಸಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸೋಮವಾರ ಅಸೋಸಿಯೇಷನ್ ಅಧ್ಯಕ್ಷರಾದ ಗಣಪತ್ ದೇಸಾಯಿ ಅವರ ನೇತೃತ್ವದ ಮಾಜಿ ಸೈನಿಕರು ಗೃಹ ಕಚೇರಿಗೆ ಆಗಮಿಸಿ, ಕೃತಜ್ಞತೆ ಸಲ್ಲಿಸಿ ಸಚಿವರನ್ನು ಸನ್ಮಾನಿಸಿದರು.
ಕಳೆದ 2 ವರ್ಷಗಳಿಂದ ಮಾಜಿ ಸೈನಿಕರು ಜಾಗಕ್ಕಾಗಿ ಪ್ರಯತ್ನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಕಟ್ಟಡಕ್ಕಾಗಿ ಜಾಗವನ್ನು ಮಂಜೂರು ಮಾಡಿಸಿ ಕೊಟ್ಟಿದ್ದಾರೆ. ದೇಶದ ರಕ್ಷಣೆಗಾಗಿ ಜೀವನವನ್ನೇ ಸವೆಸಿದ ಈ ವೀರ ಯೋಧರ ಕಲ್ಯಾಣಕ್ಕಾಗಿ ಶ್ರಮಿಸುವುದು ನನ್ನ ಆದ್ಯ ಕರ್ತವ್ಯ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಅನೇಕ ಮಾಜಿ ಸೈನಿಕರು ಮತ್ತು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 