ಭೂ ಪರಿವರ್ತನೆ ಇಲ್ಲದೆ ಕೈಗಾರಿಕೆಗಳಿಗೆ ಭೂಮಿ ವಿರೋಧ
Land opposition to industries without land conversion
ಭೂ ಪರಿವರ್ತನೆ ಇಲ್ಲದೆ ಕೈಗಾರಿಕೆಗಳಿಗೆ ಭೂಮಿ ವಿರೋಧ
ಬಳ್ಳಾರಿ 13 :ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಭೂಪರಿವರ್ತನೆ ಇಲ್ಲದೇ ಕೈಗಾರಿಕಾ ಉದ್ದೇಶಕ್ಕೆ ಬಳಸಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿರುವುದನ್ನು ಆಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ಏ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಭೂ ಪರಿವರ್ತನೆ ಪ್ರಕ್ರಿಯೆ ವಿಳಂಬವಾಗುತ್ತದೆ ಎಂಬ ನೆಪವೊಡ್ಡಿ ಬಡ ಮತ್ತು ಮಧ್ಯಮ ವರ್ಗದ ರೈತರಿಗೆ ಜೀವನಾಧಾರವಾಗಿರುವ ಭೂಮಿಯನ್ನು ಕಾರ್ೋರೇಟ್ ಬಂಡವಾಳಿಗರಿಗೆ ಹಾಗೂ ಭೂ ದಂಧೆ ನಡೆಸುವ ಮಾಫಿಯಾಗಳಿಗೆ ಎಗ್ಗಿಲ್ಲದೆ ರೈತರ ಜಮೀನನ್ನು ವಶಪಡಿಸಿಕೊಳ್ಳಲು ಅನುವು ಮಾಡಿಕೊಡಲು ಹೊರಟಿರುವ ರಾಜ್ಯ ಸರ್ಕಾರದ ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ.
ಭೂಮಿ ಕಳೆದುಕೊಂಡ ರೈತರು ಬದುಕಿನ ಆಸರೆಗಾಗಿ ಕೆಲಸ ಹುಡುಕಿಕೊಂಡು ನಗರಗಳತ್ತ ಗುಳೆ ಹೋಗುವ ಗಂಭೀರ ಸ್ವರೂಪದ ಪರಿಣಾಮವನ್ನು ಸೃಷ್ಟಿಸುತ್ತದೆ. ಈಗಾಗಲೇ ನಗರಗಳಲ್ಲಿ ನಿರುದ್ಯೋಗ ಸಮಸ್ಯೆ ಗಣನೀಯವಾಗಿ ಏರುತ್ತಿದ್ದು, ಗುಳೇ ಹೋಗುವ ರೈತಕಾರ್ಮಿಕರು ಕುಟುಂಬ ಸಹಿತ ಬೀದೀಬೀದಿಗಳಲ್ಲಿ ಜೀವನ ಸಾಗಿಸುವ ದುಸ್ಥಿತೀಗೀಡಾಗುದ್ದಾರೆ.
ಇಡೀ ರಾಜ್ಯದಲ್ಲಿ ಈಗಾಗಲೇ ಹಲವಾರು ಯೋಜನೆಗಳ ಹೆಸರಿನಲ್ಲಿ ಸಾವಿರಾರು ಎಕರೆ ರೈತರ ಫಲವತ್ತಾದ ಜಮೀನನ್ನು ವಶಪಡಿಸಿಕೊಳ್ಳಲಾಗಿದೆ. ಸಾಲಸೂಲಮಾಡಿಕೊಂಡ ಬಡರೈತರು ಅನಿವಾರ್ಯ ಕಾರಣಗಳಿಂದಾಗಿ ತಮ್ಮ ಜಮೀನನ್ನು ಮಾರಿಕೊಂಡು ಪಟ್ಟಣಗಳಿಗೆ ವಲಸೆ ಹೋಗಿ ಜೀವನಪಯಂರ್ತ ಕೂಲಿಯಾಳುಗಾಳಿಗೆ ದುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮನ್ನಾಳುವ ಸರ್ಕಾರಗಳ ಬಂಡವಾಳಶಾಹಿ ಪರ ಮತ್ತು ಉದ್ಯಮ ಪತಿಗಳ ನೀತಿಗಳಿಂದಾಗಿ ಇಂದು ರೈತರು ದಿವಾಳಿಯಾಗುತಿದ್ದಾರೆ.
60-70 ವರ್ಷಗಳಿಂದ ಉಳಿಮೆಮಾಡಿಕೊಂಡು ಬಂದ ಬಡರೈತರಿಗೆ ಹಕ್ಕು ಪತ್ರಕೊಡಲು ಮೀನ ಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ ಕೈಗಾರಿಕಾ ಪತಿಗಳಿಗೆ ಭೂಮಿ ಕೊಡಲು ತುದಿಗಾಲಮೇಲೆ ನಿಂತಿರುವುದು ಅವರ ಬಂಡವಾಳಪರ ಹಾಗೂ ರೈತ ವಿರೋಧಿ ನಿಲುವು ಸ್ಪಷ್ಟವಾಗಿ ಗೋಚರಿಸುತ್ತದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರೈತರಿಗೆ ದ್ರೋಹ ಬಗೆಯುವ ಈ ಕಾಯ್ದೆಯನ್ನು ಯಾವ ಕಾರಣಕ್ಕೂ ಮಂಡಿಸಬಾರದೆಂದು ರೈತ ಸಂಘಟನೆಯಿಂದ ಒತ್ತಾಯಿಸುತ್ತೇವೆ. ಹಾಗೂ ಸರ್ಕಾರದ ಇಂತಹ ರೈತ,ಕೃಷಿ ಕಾರ್ಮಿಕ ನೀತಿಯನ್ನು ವಿರೋಧಿಸಿ ಜನಾಂದೋಲನ ಬೆಳೆಸಲು ಮುಂಬರಬೇಕೆಂದು ಅವರು ಜನತೆಗೆ ಕರೆ ನೀಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 