ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಬೀಜೋತ್ಪಾದನೆಗೆ ಜಮೀನು ಸಿದ್ಧತೆ
Land preparation for seed production at the District Agricultural Training Center
ಲೋಕದರ್ಶನ ವರದಿ
ಕಂಪ್ಲಿ 29: ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಬೀಜೋತ್ಪಾದನಾ ಕೇಂದ್ರದಿಂದ ವಿವಿಧ ತಳಿಯ ಬೀಜ ಬಿತ್ತನೆಗೆ ಭೂಮಿಯನ್ನು ಹದಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕಕೃಷಿ ನಿರ್ದೇಶಕ ಎಂ.ದಯಾನಂದ್ ಮಾತನಾಡಿ ತಾಲ್ಲೂಕಿನಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಭೂಮಿಯನ್ನು ಹಸನು ಮಾಡಿ ಮಾಗಿ ಉಳುಕೆ ಮಾಡಲಾಗಿದ್ದು,ಈಗ ಕೇಂದ್ರದಿಂದ 6 ಹೆಕ್ಟೇರ್ ಭೂಮಿಯಲ್ಲಿ ಎಂಟಿಯು 1010 ತಳಿಯ ಭತ್ತ, 8 ಹೆಕ್ಟೇರಿನಲ್ಲಿ ಟಿಎಸ್ 3 ಆರ್ ತಳಿಯ ತೊಗರಿ, 20 ಹೆಕ್ಟೇರಿನಲ್ಲಿ ಜೆಜಿ 11 ತಳಿಯ ಕಡಲೆ, 18 ಹೆಕ್ಟೇರಿನಲ್ಲಿ ದೇಶೀಯ ತಳಿಗಳಾದ ನವಣೆ, ಬರಗು ಸೇರಿದಂತೆ ವಿವಿಧ ಸಿಧಾನ್ಯಗಳನ್ನು ಬೆಳೆಯಲಾಗುವುದು ಎಂದು ವಿವರಿಸಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಭೂಮಿಯನ್ನು ಸಮಕ್ಷೆ ಮಾಡಿಸಿದ ಬಳಿಕ ತೋಟಗಾರಿಕೆ,ಅರಣ್ಯ ಮತ್ತು ಕೃಷಿ ಬೆಳೆ ಬೆಳೆಯಲು ಉದ್ದೇಶಿಸಲಾಗಿದ್ದು, ಕ್ರೀಯಾಯೋಜನೆ ರೂಪಿಸಿ ಕೃಷಿ ಆಯುಕ್ತರಿಗೆ ಕಳುಹಿಸಲಾಗಿದೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 