ಸಂಭಾಪುರದಲ್ಲಿ ಸಚಿವರಿಂದ ಭೂಮಿಪೂಜೆ
ಗದಗ (ಸಂಭಾಪುರ) 28: ಗದಗ ತಾಲೂಕಿನ ಹಾತಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಭಾಪೂರ ಗ್ರಾಮದಲ್ಲಿ 14 ಲಕ್ಷ ರೂ. ವೆಚ್ದ ಹೆಚ್ಚುವರಿ ಜಲಸಂಗ್ರಹಗಾರದ ನಿಮರ್ಾಣದ ಕಾಮಗಾರಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಅವರು ಭೂಮಿ ಪೂಜೆ ನೆರವೇರಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯಿಂದ ನಿರ್ಮಿಸಲಾಗುವ ಮೇಲ್ಮಟ್ಟದ ಜಲಸಂಗ್ರಹಗಾರವನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯೊಂದಿಗೆ ನಿರ್ಮಿಸಲು ಸಚಿವ ಸಿ.ಸಿ.ಪಾಟೀಲ್ ಇಲಾಖೆಯ ಸಹಾಯಕ ಅಭಿಯಂತ ಎ.ಎಸ್.ಕಣವಿ ಅವರಿಗೆ ನಿದರ್ೇಶನ ನೀಡಿದರು.
ಹಾತಲಗೇರಿ ಗ್ರಾಪಂ ಉಪಾಧ್ಯಕ್ಷೆ ಶ್ರೀಮತಿ ಕುಸುಮಾ ಬಂಡಿ, ಗ್ರಾಪಂ ಸದಸ್ಯರುಗಳಾದ ಜಿ.ಆರ್.ನಾಗನೂರ, ಡಿ.ಜಿ.ಕುರುಬರ, ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕಣರ್ಿ, ಗ್ರಾಪಂ ಯೋಜನಾಭಿವೃದ್ಧಿ ಅಧಿಕಾರಿ ಎನ್.ಬಿ.ದೇಸಾಯಿ, ಗ್ರಾಮದ ಗಣ್ಯರು, ಗುರು ಹಿರಿಯರು ಹಾಗೂ ಗ್ರಾಮಸ್ಥರು ಇದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 