ಶಾಸಕರಿಂದ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

ಬ್ಯಾಡಗಿ 16:  ಸಾರ್ವಜನಿಕರಿಗೆ ಉತ್ತಮ ರಸ್ತೆ ವ್ಯವಸ್ಥೆ ಕುಡಿಯುವ ನೀರಿನ ಸಮಸ್ಯೆ ಸಾರಿಗೆ ವಿದ್ಯುತ್ ಶಿಕ್ಷಣ ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಜನರಿಗೆ ಮೂಲ ಸೌಕರ್ಯ ಒದಗಿಸಿ ಕೊಡಲು ನಿರಂತರ ಶ್ರಮಿಸುವದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಬ್ಯಾಡಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಾವೇರಿ ತಾಲೂಕಿನ ದೇವಿಹೊಸೂರ್ ಗ್ರಾಮದಲ್ಲಿ ಇಂದು ನಡೆದ ಪಿಡಬ್ಲ್ಯೂಡಿ ಇಲಾಖೆ ಬ್ಯಾಡಗಿ  ವತಿಯಿಂದ  ಎರಡು ರಸ್ತೆ ಕಾಮಗಾರಿ ಗುದ್ದಲಿ ಪೂಜೆಯನ್ನು ನೆರೆವೇರಿಸಿ ಮಾತನಾಡಿದ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಗುಣಮಟ್ಟದ ವಿಚಾರದಲ್ಲಿ ರಾಜಿ ಇಲ್ಲ ಆದ್ದರಿಂದ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ನಿಂಗನಗೌಡ  ಗುಡ್ಡನ ಗೌಡ್ರು, ಶಾಂತಣ್ಣ ಸೀಗೆಹಳ್ಳಿ, ನಿಂಗನಗೌಡ ಗೌಡ್ಗೇರಿ, ಶಫಿ ಏರೆಮನಿ, ಮಂಜುನಾಥ್ ಕರಬನ್ನವರ್, ಗೋಣೆಪ್ಪ ಕರಿಗಾರ್, ಶಶಿಧರ್ ಸೀಗೆಹಳ್ಳಿ, ರುದ್ರಣ್ಣ ಬೆಂಚಳ್ಳಿ, ಮತ್ತು  ಗ್ರಾಮ ಪಂಚಾಯತಿ ಅಧ್ಯಕ್ಷರು ಸರ್ವ ಸದಸ್ಯರು  ಕಾಂಗ್ರೆಸ್ ಪಕ್ಷದ ಮುಖಂಡರು ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು,