ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ಲೋಕದರ್ಶನ ವರದಿ
ರಾಮದುರ್ಗ 09: ಜನತೆಯ ದೈನಂದಿನ ಅವಶ್ಯಕತೆಗಳಾದ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ತಾವು ಸದಾ ಸಿದ್ಧವೆಂದು ಶಾಸಕ ಮಹಾದೇವಪ್ಪ ಯಾದವಾಡ ಭರವಸೆ ನೀಡಿದರು.
ಪಟ್ಟಣದ ನೇಕಾರ ಪೇಠ, ಮಡ್ಡಿಗಲ್ಲಿ ಸೇರಿದಂತೆ ವಿವಿಧ ವಾರ್ಡಗಳಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಸ್ಮಶಾನದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪಟ್ಟಣದ ಅಭಿವೃದ್ಧಿಗೆ ನಾಗರಿಕರು ಪಕ್ಷಾತೀತವಾಗಿ ಪರಸ್ಪರ ಸಹಕಾರದಿಂದ ವತರ್ಿಸಿ, ತಮ್ಮ ವಾರ್ಡಗಳ ಪ್ರಗತಿಯತ್ತ ಗಮನ ಹರಿಸಬೇಕೆಂದು ಸಲಹೆ ನೀಡಿದ ಅವರು, ಗುತ್ತಿಗೆದಾರರು ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಧೀರ್ಘಕಾಲ ಬಾಳಿಕೆ ಬರುವ ಕಾಮಗಾರಿ ಕೈಗೊಳ್ಳಬೇಕು. ಪುರಸಭೆ ಅಧಿಕಾರಿಗಳು ಕಳಪೆಯಾದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.
ಸೋಮನಾಥ ಧೂತ್, ಪುರಸಭೆ ಸದಸ್ಯರಾದ ಮಾಂಗಿಲಾಲ ಧೂತ್, ಶಾನೂರ ಯಾದವಾಡ, ರಾಜು ಬೆಂಬಳಗಿ, ಸಂಗೀತಾ ರಾಯಭಾಗ, ನಾಗರಾಜ ಕಟ್ಟಿಮನಿ, ಮುಖಂಡರಾದ ಗಣೇಶ ಮ್ಯಾದಾರ, ನಾರಾಯಣ ಬಂಡಿವಡ್ಡರ, ಡಿ. ಬಿ. ಬಂಡಿವಡ್ಡರ, ಪುರಸಭೆ ಅಭಿಯಂತರರಾದ ಸುಭಾಸ್ ಚೌಗಲಾ, ಎಂ. ಪಿ. ನದಾಫ್ ಸೇರಿದಂತೆ ಇತರರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 