ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಗದಗ : ಮುಳಗುಂದದ ಬಸ್ ನಿಲ್ದಾಣದಿಂದ ಲಕ್ಷ್ಮೇಶ್ವರ ರಸ್ತೆಗೆ ಕೂಡುವ ಯಳವತ್ತಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗಣಿ, ಭೂ ವಿಜ್ಞಾನ , ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯಿಂದ 2.5 ಕೋಟಿ ರೂ. ವೆಚ್ಚದ 1050 ಮೀ. ಉದ್ದದ ಈ ಕಾಮಗಾರಿ ಭೂಮಿ ಪೂಜೆ ಸಂದರ್ಭದಲ್ಲಿ ಗದಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಕೆ.ಪಾಟೀಲ, ಗದಗ ಜಿ.ಪಂ. ಅಧ್ಯಕ್ಷ ಕುಮಾರ ಸಿದ್ಧಲಿಂಗೇಶ್ವರ ಪಾಟೀಲ, ಜಿ.ಪಂ. ಸಾಮಾಜಿಕ ಸ್ತಾಯಿ ಸಮಿತ ಅಧ್ಯಕ್ಷ ಹನುಮಂತಪ್ಪ ಪೂಜಾರ, ಗದಗ ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಲೋಕೋಪಯೋಗಿ ಇಲಾಖೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೇವರಾಜ, ಜನಪ್ರತಿನಿಧಿಗಳು ಮುಳಗುಂದದ ಗುರು ಹಿರಿಯರು ಸಮಾರಂಭದಲ್ಲಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 