ಭೂಕುಸಿತ: ನಿಪ್ಪಾಣಿ - ಕೊಲ್ಹಾಪುರ ಸಂಚಾರ ಸ್ಥಗಿತ
ಬೆಳಗಾವಿ, ಆಗಸ್ಟ್ 6 ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಪ್ಪಾಣಿ ಮತ್ತು ಕೊಲ್ಹಾಪುರ ನಡುವಣ ವಾಹನ ಸಂಚಾರ ಸೋಮವಾರ ರಾತ್ರಿಯಿಂದ ಸ್ಥಗಿತಗೊಂಡಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಮಂಗಳವಾರ ತಿಳಿಸಿದ್ದಾರೆ.
ಯುಎನ್ಐ ಜೊತೆ ಮಾತನಾಡಿದ ಉತ್ತರ ವಲಯದ ಐಜಿಪಿ ರಾಗವೆನ್ಸ್ರಾ ಸುಹಾಸ್ ಅವರು, ಕರ್ನಾಟಕ ಗಡಿಯಿಂದ 12 ಕಿ.ಮೀ ದೂರದ ಕೊಗನ ಕ್ರಾಸ್ ಬಳಿ ಭೂಕುಸಿತ ಸಂಭವಿಸಿದ್ದು, ಕೂಡಲೇ ಕೊಲ್ಹಾಪುರ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ವಾಹನ ಸಂಚಾರ ನಿಲ್ಲಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮುಂದಿನ ಆದೇಶದವರೆಗೆ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಹೋಗುವ ಎಲ್ಲಾ ವಾಹನ ಸಂಚಾರ ನಿಲ್ಲಿಸಲಾಗಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಸಂಚಾರ ಕೈಗೊಳ್ಳದಂತೆ ಅವರು ವಾಹನ ಸವಾರರಿಗೆ ಮನವಿ ಮಾಡಿದ್ದು .ಬುಧವಾರ ಸಂಜೆ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಂಡು, ಸಂಚಾರ ಎಂದಿನಂತೆ ಸುಗಮವಾಗಲಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 