ಭೂಕುಸಿತ: ನಿಪ್ಪಾಣಿ - ಕೊಲ್ಹಾಪುರ ಸಂಚಾರ ಸ್ಥಗಿತ
ಬೆಳಗಾವಿ, ಆಗಸ್ಟ್ 6 ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಪ್ಪಾಣಿ ಮತ್ತು ಕೊಲ್ಹಾಪುರ ನಡುವಣ ವಾಹನ ಸಂಚಾರ ಸೋಮವಾರ ರಾತ್ರಿಯಿಂದ ಸ್ಥಗಿತಗೊಂಡಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಮಂಗಳವಾರ ತಿಳಿಸಿದ್ದಾರೆ.
ಯುಎನ್ಐ ಜೊತೆ ಮಾತನಾಡಿದ ಉತ್ತರ ವಲಯದ ಐಜಿಪಿ ರಾಗವೆನ್ಸ್ರಾ ಸುಹಾಸ್ ಅವರು, ಕರ್ನಾಟಕ ಗಡಿಯಿಂದ 12 ಕಿ.ಮೀ ದೂರದ ಕೊಗನ ಕ್ರಾಸ್ ಬಳಿ ಭೂಕುಸಿತ ಸಂಭವಿಸಿದ್ದು, ಕೂಡಲೇ ಕೊಲ್ಹಾಪುರ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ವಾಹನ ಸಂಚಾರ ನಿಲ್ಲಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮುಂದಿನ ಆದೇಶದವರೆಗೆ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಹೋಗುವ ಎಲ್ಲಾ ವಾಹನ ಸಂಚಾರ ನಿಲ್ಲಿಸಲಾಗಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಸಂಚಾರ ಕೈಗೊಳ್ಳದಂತೆ ಅವರು ವಾಹನ ಸವಾರರಿಗೆ ಮನವಿ ಮಾಡಿದ್ದು .ಬುಧವಾರ ಸಂಜೆ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಂಡು, ಸಂಚಾರ ಎಂದಿನಂತೆ ಸುಗಮವಾಗಲಿದೆ ಎಂದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 