ಭೂಕುಸಿತ: ನಿಪ್ಪಾಣಿ - ಕೊಲ್ಹಾಪುರ ಸಂಚಾರ ಸ್ಥಗಿತ
ಬೆಳಗಾವಿ, ಆಗಸ್ಟ್ 6 ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಪ್ಪಾಣಿ ಮತ್ತು ಕೊಲ್ಹಾಪುರ ನಡುವಣ ವಾಹನ ಸಂಚಾರ ಸೋಮವಾರ ರಾತ್ರಿಯಿಂದ ಸ್ಥಗಿತಗೊಂಡಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಮಂಗಳವಾರ ತಿಳಿಸಿದ್ದಾರೆ.
ಯುಎನ್ಐ ಜೊತೆ ಮಾತನಾಡಿದ ಉತ್ತರ ವಲಯದ ಐಜಿಪಿ ರಾಗವೆನ್ಸ್ರಾ ಸುಹಾಸ್ ಅವರು, ಕರ್ನಾಟಕ ಗಡಿಯಿಂದ 12 ಕಿ.ಮೀ ದೂರದ ಕೊಗನ ಕ್ರಾಸ್ ಬಳಿ ಭೂಕುಸಿತ ಸಂಭವಿಸಿದ್ದು, ಕೂಡಲೇ ಕೊಲ್ಹಾಪುರ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ವಾಹನ ಸಂಚಾರ ನಿಲ್ಲಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮುಂದಿನ ಆದೇಶದವರೆಗೆ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಹೋಗುವ ಎಲ್ಲಾ ವಾಹನ ಸಂಚಾರ ನಿಲ್ಲಿಸಲಾಗಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಸಂಚಾರ ಕೈಗೊಳ್ಳದಂತೆ ಅವರು ವಾಹನ ಸವಾರರಿಗೆ ಮನವಿ ಮಾಡಿದ್ದು .ಬುಧವಾರ ಸಂಜೆ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಂಡು, ಸಂಚಾರ ಎಂದಿನಂತೆ ಸುಗಮವಾಗಲಿದೆ ಎಂದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 