ಫೆಂಗಲ್ ಚಂಡಮಾರುತದಿಂದ ಭೂ ಕುಸಿತ: ಅವಶೇಷಗಳಡಿ ಸಿಲುಕಿದ : ಏಳು ಮಂದಿ
Landslide due to Cyclone Fengal: Seven trapped under debris
ತಿರುವಣ್ಣಾಮಲೈ 02: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಏಳು ಮಂದಿ ಭಾನುವಾರ ಸಂಜೆಯಿಂದ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಾರು 12 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೃಹತ್ ಗಾತ್ರದ ಕಲ್ಲುಗಳು ಇರುವುದರಿಂದ ಸಂತ್ರಸ್ತರನ್ನು ಪತ್ತೆ ಹಚ್ಚಲು ಸ್ಕ್ಯಾನಿಂಗ್ ಯಂತ್ರಕ್ಕೆ ಕಷ್ಟವಾಗುತ್ತಿದೆ ಎಂದು ರಕ್ಷಣಾಧಿಕಾರಿ ಸುವಿಕ್ಕೈನ್ ರಾಜ್ ತಿಳಿಸಿದ್ದಾರೆ.
ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಮಾನವಶಕ್ತಿಯನ್ನು ಅವಲಂಬಿಸಿದ್ದೇವೆ. ಸಂತ್ರಸ್ತರು ಕೆಸರಿನಡಿಯಲ್ಲಿ ಹೂತು ಹೋಗಿರುವುದು ದೃಢಪಟ್ಟಿದ್ದು, ಮೊದಲು ಕಲ್ಲುಗಳನ್ನು ತೆಗೆಯುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಚಿವ ಇ.ವಿ. ವೇಲು, ಕಲೆಕ್ಟರ್ ಬಾಸ್ಕರ ಪಾಂಡಿಯನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 