ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ: ಶಾಸಕ ರಾಜುಗೌಡ
Laptops distributed to village administrators: MLA Rajugowda
ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ: ಶಾಸಕ ರಾಜುಗೌಡ
ದೇವರಹಿಪ್ಪರಗಿ 30: ಗ್ರಾಮೀಣ ಭಾಗದ ರೈತರಿಗೆ ಶೀಘ್ರವಾಗಿ ಸೇವೆ ಒದಗಿಸಲು ನೆರವಾಗುವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಸರ್ಕಾರ ಲ್ಯಾಪ್ ಟ್ಯಾಪ್ ಒದಗಿಸಿದ್ದು ಸಮರ್ಕವಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ‘ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಜನಸಾಮಾನ್ಯರು, ಕೃಷಿಕರು ತಮ್ಮ ಕೆಲಸಕ್ಕಾಗಿ ಕಚೇರಿಗೆ ಬಂದಾಗ ಅವರನ್ನು ಪದೇ, ಪದೇ ಅಲೆಸದೆ ಶೀಘ್ರವಾಗಿ ಕೆಲಸಮಾಡಿ ಕೊಡಿ’ ಎಂದು ಹೇಳಿದರು.ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ಮಾತನಾಡಿ, ನೂತನ ತಾಲೂಕಿನಲ್ಲಿರುವ 11 ಜನ ಗ್ರಾಮ ಆಡಳಿತಾಧಿಕಾರಿಗಳಲ್ಲಿ ಸಾಂಕೇತಿಕವಾಗಿ ಶಾಸಕರ ನೇತೃತ್ವದಲ್ಲಿ 7 ಜನರಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಸ್.ಎಚ್. ರಾಠೋಡ,ಕಂದಾಯ ನೀರೀಕ್ಷಕ ಎಸ್. ಎಸ್.ಜಾಧವ,ಗ್ರಾಮ ಆಡಳಿತಾಧಿಕಾರಿಗಳಾದ ಸಂಗಮೇಶ ಗ್ವಾಳೇದ,ಅನೀಲ ರಾಠೋಡ, ರಾಮಪ್ಪ ರಾಂಪುರ ಮುಖಂಡರಾದ ವೀರೇಶ ಕುದರಿ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 