ದಿವಂಗತ ಬಸವರಾಜ ಉಳ್ಳಾಗಡ್ಡಿ ಅವರ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
Late Basavaraja Ullagaddi's birthday: Fruits distributed to patients
ಯಲಬುರ್ಗಾ 01: ತಾಲೂಕು ಸಾರ್ವಜನಿಕರ 100 ಹಾಸಿಗೆಯ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಂಗತ ಬಸವರಾಜ ಉಳ್ಳಾಗಡ್ಡಿ ಅವರ ಹುಟ್ಟುಹಬ್ಬವನ್ನು ಕುಟುಂಬದವರು ಹಾಗೂ ಅವರ ಅಭಿಮಾನಿಗಳು ಆಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ ಅಟಮಾಳಗಿ ಮಾತನಾಡಿ, ಯಲಬುರ್ಗಾ ತಾಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿವಂಗತ ಬಸವರಾಜ ಉಳ್ಳಾಗಡ್ಡಿ ಅಣ್ಣನವರು ಸದಾ ಹಸನ್ಮುಖಿಯಾಗಿದ್ದರು. ಎಲ್ಲ ಮುಖಂಡರ ಜತೆಗೂಡಿ ಪಕ್ಷ ಸಂಘಟನೆಗೆ ಪ್ರಾಮಾಣಿಕ, ದಕ್ಷತೆಯಿಂದ ದುಡಿದವರು. ತಾಲೂಕು, ಜಿಲ್ಲೆಯ ಎಲ್ಲ ಕ್ಷೇತ್ರದ ಜನರನ್ನು ಪಕ್ಷಾತೀತವಾಗಿ ಅಪ್ಪಿಕೊಳ್ಳುತ್ತಿದ್ದ ಇವರು ಮನೆಗೆ ಯಾರೇ ಬಂದರೂ ಉಪಚರಿಸಿ ಅವರ ಕಷ್ಟ ನೋವುಗಳಿಗೆ ಸ್ಪಂದಿಸಿ ಸಹಾಯ ಸಹಕಾರ ಮಾಡುತ್ತಿದ್ದ ಒಳ್ಳೆಯ ವ್ಯಕ್ತಿತ್ವ ಇವರದಾಗಿತ್ತು.
ವ್ಯಕ್ತಿತ್ವಕ್ಕೆ ಅನುಗುಣವಾಗಿ ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟುಹಬ್ಬ ನಿಜವಾದ ಅರ್ಥವನ್ನು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನೀಡಿದ್ದಾರೆ ಎಂದರು. ನಂತರ ಅನೇಕ ಶೋಷಿತರು, ಬಡವರು ಮತ್ತು ನಿರ್ಗತಿಕರಿಗೆ ಗ್ಯಾಸ್ ಒಲೆಯನ್ನು ಮತ್ತು ಆಹಾರ-ಧಾನ್ಯ ಕಿಟ್ಗಳನ್ನು ಒದಗಿಸಿದರು. ಈ ವೇಳೆ ಉಳ್ಳಾಗಡ್ಡಿ ಕುಟುಂಬದವರು ಹಾಗೂ ಅಭಿನಂದನೆಗಳು ಪಕ್ಷದ ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 