ಹಿಂದೂಗಳ ಮೇಲೆ ನಡೆದ ಲಾಠಿ ಚಾರ್ಜ ಅನ್ಯಾಯದ ನಿದರ್ಶನ: ನರಹರಿ
Lathi charge against Hindus is an example of injustice: Narahari
ಶಿಗ್ಗಾವಿ 08: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿ .ಜೆ. ಹಚ್ಚಲು ಹಾವೇರಿ ಜಿಲ್ಲೆಯಲ್ಲಿ ಪರವಾನಗಿ ನೀಡದಿರುವುದು ದುರದೃಷ್ಟಕರ ಎಂದು ಭಾಜಪ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ನರಹರಿ ಕಟ್ಟಿ ಹೇಳಿದರು.
ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಸರ್ಕಾರದ ನಿರ್ವಹಣೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಧಾರವಾಡದಲ್ಲಿ ಗಣಪತಿ ವಿಸರ್ಜನೆ ವೇಳೆ ಸಾಮಾನ್ಯ ಜನರ ಮೇಲೆ ಲಾಠಿ ಚಾರ್ಜ ಮಾಡಿರುವುದು ಹಿಂದೂಗಳ ಮೇಲೆ ನಡೆದ ಅನ್ಯಾಯದ ನಿದರ್ಶನವಾಗಿದೆ ಅಲ್ಲದೇ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅನ್ಯಕೋಮಿನ ಕೆಲ ಯುವಕರು ಹಿಂದೂಗಳ ಆರಾಧ್ಯ ದೈವವಾದ ವಿಘ್ನ ವಿನಾಶಕ ಗಣಪತಿಯ ಮೇಲೆ ಕಲ್ಲು ತೂರಿದಾಗ, ಆ ಘಟನೆಗೆ ವಿರೋಧವಾಗಿ ಪ್ರತಿಭಟಿಸಿದ ಹಿಂದೂಗಳನ್ನು ಬಂಧಿಸಿ, ನಿರಪರಾಧಿಗಳ ಮೇಲೆ ಲಾಠಿ ಚಾರ್ಜ ಮಾಡಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ದುಸ್ಥಿತಿಯನ್ನು ತೋರಿಸುತ್ತದೆ. ಇನ್ನೂ ನೋವುಂಟುಮಾಡುವ ಸಂಗತಿ ಎಂದರೆ, ಪ್ರತಿಭಟನೆಯ ಸಂದರ್ಭದಲ್ಲಿ ಒಬ್ಬ ಪೊಲೀಸ್ ಪೇದೆ ಕಾನೂನು ಬಾಹಿರವಾಗಿ ಹಿಂದೂ ಯುವತಿಯ ಮೇಲೆ ಲಾಠಿ ಬೀಸಿರುವುದು. ಇದು ಕೇವಲ ದುರಂತವಲ್ಲ, ಪಂಚ ಭಾಗ್ಯದ ಜೊತೆಗೆ ರಾಜ್ಯದ ಹಿಂದೂಗಳಿಗೆ ಲಾಠಿಭಾಗ್ಯ ಎಂಬ ಯೋಜನೆಯನ್ನು ಹಬ್ಬದ ಸಂದರ್ಭದಲ್ಲಿ ನೀಡಿದಂತಾಗಿದೆ. ಪ್ರಸ್ತುತ ಪರಿಸ್ಥಿತಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 