ಹಿಂದೂಗಳ ಮೇಲೆ ನಡೆದ ಲಾಠಿ ಚಾರ್ಜ ಅನ್ಯಾಯದ ನಿದರ್ಶನ: ನರಹರಿ
Lathi charge against Hindus is an example of injustice: Narahari
ಶಿಗ್ಗಾವಿ 08: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿ .ಜೆ. ಹಚ್ಚಲು ಹಾವೇರಿ ಜಿಲ್ಲೆಯಲ್ಲಿ ಪರವಾನಗಿ ನೀಡದಿರುವುದು ದುರದೃಷ್ಟಕರ ಎಂದು ಭಾಜಪ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ನರಹರಿ ಕಟ್ಟಿ ಹೇಳಿದರು.
ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಸರ್ಕಾರದ ನಿರ್ವಹಣೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಧಾರವಾಡದಲ್ಲಿ ಗಣಪತಿ ವಿಸರ್ಜನೆ ವೇಳೆ ಸಾಮಾನ್ಯ ಜನರ ಮೇಲೆ ಲಾಠಿ ಚಾರ್ಜ ಮಾಡಿರುವುದು ಹಿಂದೂಗಳ ಮೇಲೆ ನಡೆದ ಅನ್ಯಾಯದ ನಿದರ್ಶನವಾಗಿದೆ ಅಲ್ಲದೇ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅನ್ಯಕೋಮಿನ ಕೆಲ ಯುವಕರು ಹಿಂದೂಗಳ ಆರಾಧ್ಯ ದೈವವಾದ ವಿಘ್ನ ವಿನಾಶಕ ಗಣಪತಿಯ ಮೇಲೆ ಕಲ್ಲು ತೂರಿದಾಗ, ಆ ಘಟನೆಗೆ ವಿರೋಧವಾಗಿ ಪ್ರತಿಭಟಿಸಿದ ಹಿಂದೂಗಳನ್ನು ಬಂಧಿಸಿ, ನಿರಪರಾಧಿಗಳ ಮೇಲೆ ಲಾಠಿ ಚಾರ್ಜ ಮಾಡಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ದುಸ್ಥಿತಿಯನ್ನು ತೋರಿಸುತ್ತದೆ. ಇನ್ನೂ ನೋವುಂಟುಮಾಡುವ ಸಂಗತಿ ಎಂದರೆ, ಪ್ರತಿಭಟನೆಯ ಸಂದರ್ಭದಲ್ಲಿ ಒಬ್ಬ ಪೊಲೀಸ್ ಪೇದೆ ಕಾನೂನು ಬಾಹಿರವಾಗಿ ಹಿಂದೂ ಯುವತಿಯ ಮೇಲೆ ಲಾಠಿ ಬೀಸಿರುವುದು. ಇದು ಕೇವಲ ದುರಂತವಲ್ಲ, ಪಂಚ ಭಾಗ್ಯದ ಜೊತೆಗೆ ರಾಜ್ಯದ ಹಿಂದೂಗಳಿಗೆ ಲಾಠಿಭಾಗ್ಯ ಎಂಬ ಯೋಜನೆಯನ್ನು ಹಬ್ಬದ ಸಂದರ್ಭದಲ್ಲಿ ನೀಡಿದಂತಾಗಿದೆ. ಪ್ರಸ್ತುತ ಪರಿಸ್ಥಿತಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 