ಪಂಚಮಸಾಲಿಗರ ಮೇಲೆ ಲಾಠಿ ಪ್ರಹಾರ, ಮುಖ್ಯಮಂತ್ರಿಗಳು ಕ್ಷಮೆ ಕೇಳಬೇಕು: ವಿಜಯೇಂದ್ರ ಒತ್ತಾಯ
Lathi charge on Panchmasali, Chief Minister should apologize: Vijayendra insists
ಬೆಳಗಾವಿ 12: ಪೊಲೀಸರನ್ನು ದುರುಪಯೋಗ ಪಡಿಸಿಕೊಂಡು ಸರಕಾರ ಪಂಚಮಸಾಲಿಗರ ಮೇಲೆ ಲಾಠಿ ಪ್ರಹಾರ ಮಾಡಿದೆ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ಆಗ್ರಹಿಸಲಾಗುತ್ತಿದೆ. ಇದರ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಹೇಳಿದ್ದರು. ಆದರೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದ ಸಮಾಜ ಬಾಂಧವರ ಮೇಲೆ ಲಾಠಿ ಚಾರ್ಜ್ ಮಾಡಿ, ಹೋರಾಟವನ್ನು ಹತ್ತಿಕ್ಕುವ ಕೆಲಸ ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ಆಗಿದೆ. ಲಾಠಿ ಪ್ರಹಾರದ ಹಿಂದೆ ಷಡ್ಯಂತ್ರವಿದೆ. ಇದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳಿಗೆ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇದೆಯೋ ಇಲ್ಲವೋ ಎಂಬ ಅನುಮಾನ ಇದೆ ಎಂದರು.
ಇದು ಕೇವಲ ಪಂಚಮಸಾಲಿ ಸಮಾಜದ ಪ್ರಶ್ನೆ ಇಲ್ಲ. ಇದು ಇಡೀ ನಾಡಿನ ಜನತೆ ಪ್ರಶ್ನೆ. ಮುಖ್ಯಮಂತ್ರಿಗಳಿಗೆ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸವಿದ್ದರೆ ಮನವಿ ಸ್ವೀಕರಿಸಬಹುದಿತ್ತು. ಆದರೆ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಂಡು ಲಾಠಿ ಪ್ರಹಾರ ಮಾಡಿದೆ. ಹೀಗಾಗಿ ಮುಖ್ಯಮಂತ್ರಿಗಳು ಕ್ಷಮೆ ಕೇಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 