ಹಡಪದ ಅಪ್ಪಣ್ಣ ಸಮುದಾಯ ಭವನ ಅಭಿವೃದ್ಧಿಗೆ ಚಾಲನೆ
Launch of development work for Hadapada Appanna Community Hall
ಲೋಕದರ್ಶನ ವರದಿ
ಮಹಾಲಿಂಗಪುರ 6: ಹಡಪದ ಅಪ್ಪಣ್ಣ ಅವರು ವಚನ ಸಾಹಿತ್ಯ ಮತ್ತು ಶರಣ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ ಮಹನೀಯರಾಗಿದ್ದು, ಅವರ ತತ್ವಾದರ್ಶಗಳನ್ನು ಪಾಲಿಸುವ ಸಮಾಜದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು. ಸಮುದಾಯ ಭವನಗಳು ಕೇವಲ ಕಟ್ಟಡಗಳಾಗಿರದೆ, ಸಮಾಜದ ಜನರನ್ನು ಒಗ್ಗೂಡಿಸುವ ಹಾಗೂ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿವೆ ಎಂದು ಶಾಸಕ ಸಿದ್ದು ಸವದಿ ಅವರು ತಿಳಿಸಿದರು.
ಸಮೀಪದ ಚಿಮ್ಮಡ ಗ್ರಾಮದಲ್ಲಿ ಹಡಪದ ಅಪ್ಪಣ್ಣ ಸಮುದಾಯದ ಬಹುದಿನಗಳ ಕನಸಾಗಿದ್ದ ಸಮುದಾಯ ಭವನ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ ಮಂಜೂರಾದ ?5 ಲಕ್ಷ ಅನುದಾನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು. ಗ್ರಾಮೀಣ ಭಾಗದ ಎಲ್ಲ ಸಮುದಾಯಗಳಿಗೂ ಮೂಲಸೌಕರ್ಯ ಕಲ್ಪಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ಸಾನಿಧ್ಯ ವಹಿಸಿದ್ದ ಪ್ರಭು ಸ್ವಾಮೀಜಿಗಳು ಆಶೀರ್ವಚನ ನೀಡಿ, ಸಮಾಜದ ಅಭಿವೃದ್ಧಿಗಾಗಿ ಜನಪ್ರತಿನಿಧಿಗಳು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಶಿಕ್ಷಣ, ಸಂಘಟನೆ ಹಾಗೂ ಸಾಮಾಜಿಕ ಜಾಗೃತಿಯ ಮೂಲಕ ಸಮಾಜ ಇನ್ನಷ್ಟು ಪ್ರಗತಿಯತ್ತ ಸಾಗಬೇಕು. ನಿರ್ಮಾಣವಾಗುತ್ತಿರುವ ಸಮುದಾಯ ಭವನವು ಸಮಾಜದ ಎಲ್ಲ ವರ್ಗದವರನ್ನು ಒಗ್ಗೂಡಿಸುವ ಕೇಂದ್ರವಾಗಲಿ ಎಂದು ಹಾರೈಸಿದರು.
ಸಮುದಾಯದ ಮುಖಂಡ ಶಿವಾನಂದ ನಾವಿ ಮಾತನಾಡಿ, ಸಮುದಾಯ ಭವನ ನಿರ್ಮಾಣವು ನಮ್ಮ ಸಮಾಜದ ಬಹುವರ್ಷಗಳ ಬೇಡಿಕೆಯಾಗಿತ್ತು. ಶಾಸಕರ ಪ್ರಯತ್ನದಿಂದ ಅನುದಾನ ದೊರೆತಿರುವುದು ಸಂತಸದ ಸಂಗತಿಯಾಗಿದೆ. ಈ ಭವನದಿಂದ ಸಮಾಜದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಗುರುಲಿಂಗಪ್ಪ ಪೂಜಾರಿ, ಶಂಕರ ಬಟಕುರ್ಕಿ, ಬೀರ್ಪ ಹಳಮಣಿ, ಪ್ರಭು ಮುಧೋಳ, ಮನೋಜ ಹಟ್ಟಿ, ಚೆನ್ನಪ್ಪ ತೇಲಿ, ಪ್ರಕಾಶ ಪಾಟೀಲ, ಕುಮಾರ್ ಪೂಜಾರಿ, ಆನಂದ ಕೌಟಿ, ಅವ್ವಣ್ಣಪ್ಪ ಮುಗಳಕೋಡ, ನಾಗಪ್ಪ ನಾವಿ, ಪ್ರಭು ನಾವಿ, ಅಲ್ಲಪ್ಪ ನಾವಿ, ಮಹಾಲಿಂಗ ನಾವಿ, ಬಸವರಾಜ ನಾವಿ, ಶ್ರೀಶೈಲ ನಾವಿ ಸೇರಿದಂತೆ ಸಮಾಜದ ಮುಖಂಡರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 