ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಣೆಗೆ ಚಾಲನೆ
Launch of free bus pass distribution for students
ಸವದತ್ತಿ 3 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಅಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಣಾ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ವಿಶ್ವಾಸ್ ವೈದ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಜನಪರ ಯೋಜನೆಗಳನ್ನು ವಿದ್ಯಾರ್ಥಿಗಳು ಸಮರ್ಕವಾಗಿ ಬಳಸಿಕೊಳ್ಳಬೇಕು. ಆರ್ಥಿಕ ಅಡಚಣೆ ಇಲ್ಲದೆ ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.
ಸವದತ್ತಿ ಸಾರಿಗೆ ಘಟಕದ ವ್ಯವಸ್ಥಾಪಕ ಬಿ.ಕೆ. ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಶಕ್ತಿ ಯೋಜನೆಯಡಿ ಸವದತ್ತಿ ಘಟಕದ 1,089, ಮುನವಳ್ಳಿ ಘಟಕದ 687 ಹಾಗೂ ಯರಗಟ್ಟಿ ಘಟಕದ 414 ಅರ್ಹ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಉಚಿತ ಬಸ್ಪಾಸ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನೂ ಬಸ್ಪಾಸ್ ಪಡೆಯದ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿತ ಸಾರಿಗೆ ಡಿಪೋ ಕಚೇರಿಯನ್ನು ಸಂಪರ್ಕಿಸಿ ಪಾಸ್ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಸವರಾಜ ಅಯ್ಯನಗೌಡ್ರ, ಗೀರೀಶ್ ಮುನವಳ್ಳಿ, ಸುರೇಶ್ ತುಪ್ಪದ, ಶಿವಕುಮಾರ್ ರಾಠೋಡ್, ಸಾರಿಗೆ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 