ಅದ್ದೂರಿ ಮದುವೆ: ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು
ಬೆಳಗಾವಿ, ಜುಲೈ 14: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಗನ ಅದ್ಧೂರಿ ಮದುವೆ ಮಾಡಿದ್ದ ಬಿಜೆಪಿ ಮುಖಂಡ ದಯಾನಂದ ವಂಟಮುರಿ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೋಮವಾರ ಕೊವಿಡ್-19 ನಿಯಮಗಳನ್ನು ಗಾಳಿಗೆ ತೂರಿ ಮಗನ ಮದುವೆ ಮಾಡಿದ್ದ ದಯಾನಂದ ವಂಟಮುರಿ, ಮಹಾರಾಷ್ಟ್ರದಿಂದ ಸಾಕಷ್ಟು ಜನರನ್ನು ಮದುವೆಗೆ ಕರೆಯಿಸಿದ್ದರು. ಮದುವೆ ಜೊತೆ ಸಂಜೆ ಗ್ರಾಮದಲ್ಲಿ ವಧು-ವರನ ಅದ್ಧೂರಿ ಮೆರವಣಿಗೆ ಮಾಡಿದ್ದರು.
500ಕ್ಕೂ ಹೆಚ್ಚು ಜನರನ್ನು ಮದುವೆಯಲ್ಲಿ ಸೇರಿದ್ದು, ಮಾಸ್ಕ್ ಬಳಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್-19 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 188, 269, 270, ಎಪಿಡೆಮಿಕ್ ಡಿಸೀಸ್ ಕಾಯ್ದೆ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಪ್ರಕರಣ ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಮದಹಳ್ಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರು 4 ಕಿ.ಮೀ ಅಂತರದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಈ ರೀತಿ ಅದ್ಧೂರಿ ಮದುವೆ ಮಾಡಿದ್ದು ಜನರಲ್ಲಿ ಆತಂಕಕ್ಕೆ ಹೆಚ್ಚಾಗುವಂತೆ ಮಾಡಿದೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 