ಅದ್ದೂರಿ ಮದುವೆ: ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು
ಬೆಳಗಾವಿ, ಜುಲೈ 14: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಗನ ಅದ್ಧೂರಿ ಮದುವೆ ಮಾಡಿದ್ದ ಬಿಜೆಪಿ ಮುಖಂಡ ದಯಾನಂದ ವಂಟಮುರಿ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೋಮವಾರ ಕೊವಿಡ್-19 ನಿಯಮಗಳನ್ನು ಗಾಳಿಗೆ ತೂರಿ ಮಗನ ಮದುವೆ ಮಾಡಿದ್ದ ದಯಾನಂದ ವಂಟಮುರಿ, ಮಹಾರಾಷ್ಟ್ರದಿಂದ ಸಾಕಷ್ಟು ಜನರನ್ನು ಮದುವೆಗೆ ಕರೆಯಿಸಿದ್ದರು. ಮದುವೆ ಜೊತೆ ಸಂಜೆ ಗ್ರಾಮದಲ್ಲಿ ವಧು-ವರನ ಅದ್ಧೂರಿ ಮೆರವಣಿಗೆ ಮಾಡಿದ್ದರು.
500ಕ್ಕೂ ಹೆಚ್ಚು ಜನರನ್ನು ಮದುವೆಯಲ್ಲಿ ಸೇರಿದ್ದು, ಮಾಸ್ಕ್ ಬಳಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್-19 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 188, 269, 270, ಎಪಿಡೆಮಿಕ್ ಡಿಸೀಸ್ ಕಾಯ್ದೆ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಪ್ರಕರಣ ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಮದಹಳ್ಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರು 4 ಕಿ.ಮೀ ಅಂತರದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಈ ರೀತಿ ಅದ್ಧೂರಿ ಮದುವೆ ಮಾಡಿದ್ದು ಜನರಲ್ಲಿ ಆತಂಕಕ್ಕೆ ಹೆಚ್ಚಾಗುವಂತೆ ಮಾಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 